15 ದಿನಗಳ ಒಳಗೆ ಸುರತ್ಕಲ್‌ ಟೋಲ್‌ ಗೇಟ್ ತೆರವು  : ಕೇಂದ್ರ ಸಚಿವ ಗಡ್ಕರಿ ಭರವಸೆ – Vishwanews24

Featured, ದಕ್ಷಿಣ ಕನ್ನಡ

15 ದಿನಗಳ ಒಳಗೆ ಸುರತ್ಕಲ್‌ ಟೋಲ್‌ ಗೇಟ್ ತೆರವು  : ಕೇಂದ್ರ ಸಚಿವ ಗಡ್ಕರಿ ಭರವಸೆ

ಸುರತ್ಕಲ್‌ : 15 ದಿನಗಳ ಒಳಗಾಗಿ ಸುರತ್ಕಲ್‌ ನ ಟೋಲ್‌ ಗೇಟನ್ನು ತೆರವುಗೊಳಿಸುವುದಾಗಿ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಭರವಸೆಯನ್ನು ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಟ್ರಕ್‌ ಮಾಲಕರ ಸಂಘದ ಅಧ್ಯಕ್ಷ ಸುನೀಲ್‌ ಡಿ’ಸೋಜಾ ಅವರು ತಿಳಿಸಿದ್ದಾರೆ.

ಕೂಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ನಮ್ಮ ಸಂಘದ ರಾಜ್ಯಾಧ್ಯಕ್ಷ ಡಾ| ಜಿ.ಆರ್‌.ಷಣ್ಮುಗಪ್ಪ ಅವರು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಸೆ. 9ರಂದು ಟ್ರಾನ್ಸ್‌ ಪೋರ್ಟ್‌ ಮೀಟ್‌ ಸಭೆಯ ಬಳಿಕ ಭೇಟಿ ಮಾಡಿ ಟೋಲ್‌ ಗೇಟ್‌ ತೆರವು ಬಗ್ಗೆ ಮನವಿ ನೀಡಿದ್ದರು. ಇದಕ್ಕೆ ಸಚಿವರಿಂದ ಭರವಸೆ ದೊರಕಿದೆ. ಟೋಲ್‌ ಗೇಟ್‌ ವಿರೋಧಿ ಸಮಿತಿ ನಡೆಸಲು ಉದ್ದೇಶಿಸಿರುವ ಧರಣಿಯಲ್ಲಿ ನಾವೂ ಭಾಗಿಯಾಗುತ್ತೇವೆ. ಸರಕಾರ ಮಾತು ತಪ್ಪಿದಲ್ಲಿ ಟ್ರಕ್‌ಗಳ ಮೂಲಕ ಟೋಲ್‌ ಗೇಟ್‌ಗೆ ಮುತ್ತಿಗೆ ಹಾಕುತ್ತೇವೆ ಎಂದರು.

ಮಾತಿನಲ್ಲಿ ಹಿಡಿತವಿರಲಿ,ಪರರನ್ನು ಅಗೌರವಿಸಬೇಡಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮಂಗಳೂರಿನಿಂದ ಲಾರಿಗಳಿಗೆ ಬಾಡಿಗೆ ನಿಗದಿ ಪಡಿಸುವ ಬಗ್ಗೆ ರಾಜ್ಯಾಧ್ಯಕ್ಷ ಷಣ್ಮುಗಪ್ಪ ಹಾಗೂ ಇತರರೊಂದಿಗೆ ನಮ್ಮ ಸಂಘದ ಮಹತ್ವದ ಸಭೆ ಸೆ. 13ರಂದು ಮಂಗಳೂರಿನಲ್ಲಿ ನಡೆಯಲಿದೆ. ಜಂಟಿ ಸಭೆಯಲ್ಲಿ ದರ ನಿಗದಿ ಪಡಿಸಿ ಜಾರಿಗೆ ತರುತ್ತೇವೆ. ಇದಕ್ಕೆ ವಿರೋಧ ಕಂಡುಬಂದಲ್ಲಿ ಲಾರಿ ಮುಷ್ಕರ ಸಹಿತ ನಮ್ಮ ಪ್ರತಿಭಟನೆ ಮುಂದಿನ ದಿನಗಳಲ್ಲಿ ಉಗ್ರವಾಗಿ ನಡೆಯಲಿದೆ ಎಂದು ತಿಳಿಸಿದರು.

ಇನ್ನು ಸುರತ್ಕಲ್‌ ಟೋಲ್‌ ಗೇಟ್‌ ಮುಂಭಾಗ ಇಂದು ಹಮ್ಮಿಕೊಂಡಿರುವ ಸಾಮೂಹಿಕ ಧರಣಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ಧರಣಿಗೆ ಟ್ಯಾಕ್ಸಿಮೆನ್ಸ್‌ ಮತ್ತು ಮ್ಯಾಕ್ಸಿ ಕ್ಯಾಬ್‌ ಅಸೋಸಿಯೇಶನ್‌, ಉಭಯ ಜಿಲ್ಲೆಗಳ ಬಸ್‌ ಮಾಲಕರ ಸಂಘಟನೆಗಳು, ಕಾರ್ಮಿಕರ ಸಂಘಟನೆಗಳು, ವಿವಿಧ ಪಕ್ಷಗಳು ಸೇರಿದಂತೆ ಹಲವು ಸಂಘ- ಸಂಸ್ಥೆಗಳು ಭಾಗವಹಿಸುವುದಾಗಿ ಘೋಷಿಸಿವೆ.” ಎಂದು ತಿಳಿದು ಬಂದಿದೆ.

ಕಾರ್ಕಳ : ಖಾಸಗಿ ಬಸ್ ಹಾಗೂ ಪಿಕಪ್ ಢಿಕ್ಕಿ : ಪಿಕಪ್ ಚಾಲಕ ಸಾವು – Vishwanews24

 

Leave a Reply