ಮಂಗಳೂರು: ಕಂಬಳ ಕರೆಯ ಅಡ್ಡಹಲಗೆ ವಿಭಾಗದ ಚಾಂಪಿಯನ್, ಸುಮಾರು 150ಕ್ಕೂ ಅಧಿಕ ಪದಕ ಪಡೆದ ಕೋಣ “ಬೋಳಾರ ಕುಟ್ಟಿ’ ಕೋಣ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದೆ.
ಸುರತ್ಕಲ್ ಸರ್ವೋತ್ತಮ ಮಾಧವ ಪ್ರಭು ಅವರಲ್ಲಿದ್ದ ಕುಟ್ಟಿ 92 ಪದಕವನ್ನು ಪಡೆದಿತ್ತು. ಬಳಿಕ 2019ರಲ್ಲಿ ಬೋಳಾರ ತ್ರಿಶಾಲ್ ಕೆ.ಪೂಜಾರಿ ಅವರು ಕುಟ್ಟಿಯನ್ನು ಖರೀದಿಸಿದ್ದರು. ಮಿಂಚಿನ ಓಟದೊಂದಿಗೆ ಅಡ್ಡಹಲಗೆ ವಿಭಾಗದಲ್ಲಿ ಕುಟ್ಟಿ ಚಾಂಪಿಯನ್ ಸ್ಥಾನ ಪಡೆದಿತ್ತು.
ಅಡ್ಡ ಹಲಗೆ ಹಾಗೂ ಕನೆಹಲಗೆ ವಿಭಾಗದಲ್ಲಿ ಕುಟ್ಟಿ ಅಭೂತಪೂರ್ವ ಸಾಧನೆ ಮೂಲಕ ಎಲ್ಲರ ಗಮನ ಸೆಳೆದಿತ್ತು. ಕನೆಹಲಗೆ ವಿಭಾಗದಲ್ಲಿ ಕುಟ್ಟಿಯು ನಿಶಾನೆಗೆ ನೀರು ಚಿಮ್ಮಿಸುವ ಮೂಲಕ ಹಲವು ಬಾರಿ ಪದಕ ಪಡೆದಿತ್ತು.
ಅಡ್ಡ ಹಲಗೆ ಹಾಗೂ ಕನೆ ಹಲಗೆ ವಿಭಾಗದಲ್ಲಿ ತ್ರಿಶಾಲ್ ಕೆ.ಪೂಜಾರಿ ಅವರಿಗೆ 50ಕ್ಕೂ ಮಿಕ್ಕಿ ಪದಕಗಳನ್ನು ದೊರಕಿಸಿಕೊಟ್ಟ ಕುಟ್ಟಿ ಒಟ್ಟು 150ಕ್ಕೂ ಮೀರಿ ಪದಕಗಳನ್ನು ತನ್ನದಾಗಿಸಿದೆ. ಅಡ್ಡಹಲಗೆಯ ವಿಭಾಗದಲ್ಲಿ ಕುಟ್ಟಿ ಚಾಂಪಿಯನ್ ಗೌರವವನ್ನೂ ಪಡೆದಿತ್ತು. ಕಳೆದ ವರ್ಷದ ಕಂಬಳದ ವೇಳೆ ಅದರ ಕೊಂಬಿಗೆ ಗಾಯವಾಗಿತ್ತು. ಬಳಿಕ ವೈದ್ಯರಲ್ಲಿ ಪರೀಕ್ಷಿಸಿದಾಗ ಅದಕ್ಕೆ ಅನಾರೋಗ್ಯದ ಮಾಹಿತಿ ತಿಳಿಯಿತು. ಅದರ ಬಳಿಕ ಕಂಬಳ ಕರೆಯ ಓಟ ನಿಲ್ಲಿಸಿತ್ತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…