Featured

150ಕ್ಕೂ ಅಧಿಕ ಪದಕ ಪಡೆದ ಬೋಳಾರ ಕುಟ್ಟಿ ಇನ್ನಿಲ್ಲ – vishwanews24

150ಕ್ಕೂ ಅಧಿಕ ಪದಕ ಪಡೆದ ಬೋಳಾರ ಕುಟ್ಟಿ ಇನ್ನಿಲ್ಲ

ಮಂಗಳೂರು: ಕಂಬಳ ಕರೆಯ ಅಡ್ಡಹಲಗೆ ವಿಭಾಗದ ಚಾಂಪಿಯನ್, ಸುಮಾರು 150ಕ್ಕೂ ಅಧಿಕ ಪದಕ ಪಡೆದ ಕೋಣ “ಬೋಳಾರ ಕುಟ್ಟಿ’ ಕೋಣ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದೆ.

ಸುರತ್ಕಲ್ ಸರ್ವೋತ್ತಮ ಮಾಧವ ಪ್ರಭು ಅವರಲ್ಲಿದ್ದ ಕುಟ್ಟಿ 92 ಪದಕವನ್ನು ಪಡೆದಿತ್ತು. ಬಳಿಕ 2019ರಲ್ಲಿ ಬೋಳಾರ ತ್ರಿಶಾಲ್ ಕೆ.ಪೂಜಾರಿ ಅವರು ಕುಟ್ಟಿಯನ್ನು ಖರೀದಿಸಿದ್ದರು. ಮಿಂಚಿನ ಓಟದೊಂದಿಗೆ ಅಡ್ಡಹಲಗೆ ವಿಭಾಗದಲ್ಲಿ ಕುಟ್ಟಿ ಚಾಂಪಿಯನ್ ಸ್ಥಾನ ಪಡೆದಿತ್ತು.

ಅಡ್ಡ ಹಲಗೆ ಹಾಗೂ ಕನೆಹಲಗೆ ವಿಭಾಗದಲ್ಲಿ ಕುಟ್ಟಿ ಅಭೂತಪೂರ್ವ ಸಾಧನೆ ಮೂಲಕ ಎಲ್ಲರ ಗಮನ ಸೆಳೆದಿತ್ತು. ಕನೆಹಲಗೆ ವಿಭಾಗದಲ್ಲಿ ಕುಟ್ಟಿಯು ನಿಶಾನೆಗೆ ನೀರು ಚಿಮ್ಮಿಸುವ ಮೂಲಕ ಹಲವು ಬಾರಿ ಪದಕ ಪಡೆದಿತ್ತು.

ಅಡ್ಡ ಹಲಗೆ ಹಾಗೂ ಕನೆ ಹಲಗೆ ವಿಭಾಗದಲ್ಲಿ ತ್ರಿಶಾಲ್ ಕೆ.ಪೂಜಾರಿ ಅವರಿಗೆ 50ಕ್ಕೂ ಮಿಕ್ಕಿ ಪದಕಗಳನ್ನು ದೊರಕಿಸಿಕೊಟ್ಟ ಕುಟ್ಟಿ ಒಟ್ಟು 150ಕ್ಕೂ ಮೀರಿ ಪದಕಗಳನ್ನು ತನ್ನದಾಗಿಸಿದೆ. ಅಡ್ಡಹಲಗೆಯ ವಿಭಾಗದಲ್ಲಿ ಕುಟ್ಟಿ ಚಾಂಪಿಯನ್ ಗೌರವವನ್ನೂ ಪಡೆದಿತ್ತು. ಕಳೆದ ವರ್ಷದ ಕಂಬಳದ ವೇಳೆ ಅದರ ಕೊಂಬಿಗೆ ಗಾಯವಾಗಿತ್ತು. ಬಳಿಕ ವೈದ್ಯರಲ್ಲಿ ಪರೀಕ್ಷಿಸಿದಾಗ ಅದಕ್ಕೆ ಅನಾರೋಗ್ಯದ ಮಾಹಿತಿ ತಿಳಿಯಿತು. ಅದರ ಬಳಿಕ ಕಂಬಳ ಕರೆಯ ಓಟ ನಿಲ್ಲಿಸಿತ್ತು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

5 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

5 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

7 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

7 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

8 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

8 hours ago