Featured

16-07-2021 : ಇಂದಿನ ದಿನ ಭವಿಷ್ಯ -Vishwanews24

16-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಸಾಂಸಾರಿಕ ಜೀವನದಲ್ಲಿ ಬಹುದಿನಗಳಿಂದ ಇದ್ದ ಕಿರಿಕಿರಿ ದೂರಾಗಿ ನೆಮ್ಮದಿ ನೆಲೆಸಲಿದೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ಕಾಲ ಕೊನೆಗೂ ಕೂಡಿ ಬರಲಿದೆ. ವ್ಯಾಪಾರಿಗಳಿಗೆ ದಿನದ ಕೊನೆಯಲ್ಲಿ ಲಾಭ ಸಿಗಲಿದೆ.

ವೃಷಭ : ದೂರ ಪ್ರಯಾಣದ ಕೆಲಸಗಳನ್ನ ಮುಂದೂಡಲಿದ್ದೀರಿ. ಇದಕ್ಕೆ ನಿಮ್ಮ ಆರೋಗ್ಯ ಸಮಸ್ಯೆಯೇ ಕಾರಣ. ಹೀಗಾಗಿ ಆರೋಗ್ಯದ ಕಡೆ ಜಾಗ್ರತೆ ವಹಿಸಿ. ಸಾರ್ವಜನಿಕ ರಂಗದಲ್ಲಿ ರಾಜಕಾರಣಿಗಳಿಗೆ ಉತ್ತಮ ಪ್ರಶಂಸೆ ಸಿಗಲಿದೆ.

ಮಿಥುನ : ಕಚೇರಿ ಕೆಲಸದಲ್ಲಿ ನೆಮ್ಮದಿ ಇದೆ. ಕೃಷಿ ರಂಗದ ಕಾರ್ಯಗಳೂ ಸಹ ಯಾವುದೇ ಕಿರಿಕಿರಿ ಇಲ್ಲದೇ ಸಾಂಘವಾಗಿ ನೆರವೇರಲಿದೆ. ನಿರುದ್ಯೋಗಿಗಳಿಗೆ ಕಷ್ಟ ತಪ್ಪಿದ್ದಲ್ಲ. ಕುಲದೇವತೆಯನ್ನ ಆರಾಧಿಸಿ.

ಕಟಕ : ವಿದ್ಯಾರ್ಥಿಗಳಿಗೆ ಹಿನ್ನಡೆ ಉಂಟಾಗಲಿದೆ. ಮದುವೆಗಾಗಿ ಅರಸುತ್ತಿರುವವರಿಗೆ ಉತ್ತಮ ಸಂಬಂಧ ಕೂಡಿ ಬರಲಿದೆ. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯುವ ಮುನ್ಸೂಚನೆ ಸಿಗಲಿದೆ. ಮೇಲಾಧಿಕಾರಿಗಳಿಂದ ಪ್ರಶಂಸೆ ಗಳಿಸಲಿದ್ದೀರಿ.

ಸಿಂಹ : ಪಿತ್ರಾರ್ಜಿತ ಆಸ್ತಿಯಲ್ಲಿ ಇದ್ದ ಕಿರಿಕಿರಿ ಹಾಗೆಯೇ ಮುಂದುವರಿಯಲಿದೆ. ಜವಳಿ ಉದ್ಯಮಿಗಳಿಗೆ ಇಂದು ಲಾಭ ಕಾದಿದೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ. ಪೋಷಕರ ಆರೋಗ್ಯದ ಕಡೆಗೆ ಜಾಗ್ರತೆ ವಹಿಸಿ.

ಕನ್ಯಾ : ಕೆಲಸದ ಸ್ಥಳವನ್ನ ಬದಲಾವಣೆ ಮಾಡುವ ಸಾಧ್ಯತೆ ಇದೆ. ಮನೆಯಲ್ಲಿನ ಮನಸ್ತಾಪಗಳಿಗೆ ನೀವೇ ಕಾರಣ ಆಗಬಹುದು. ನಿಮ್ಮ ಮೇಲೆ ಅಪವಾದ ಎದುರಾಗುವ ಸಾಧ್ಯತೆ ಇದೆ. ಪೋಷಕರೊಂದಿಗೆ ಅನಗತ್ಯ ವಾದ ಬೇಡ.

ತುಲಾ : ಮನೆಯಲ್ಲಿ ಧಾರ್ಮಿಕ ಕಾರ್ಯಗಳು ಸ್ಥಗಿತಗೊಳ್ಳಲಿದೆ. ಕುಟುಂಬದವರಲ್ಲಿ ಆತಂಕದ ವಾತಾವರಣ ಉಂಟಾಗಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಿ. ಗುರು ರಾಘವೇಂದ್ರನ ಧ್ಯಾನ ಮಾಡಿ.

ವೃಶ್ಚಿಕ : ವ್ಯವಹಾರದಲ್ಲಿ ಲಾಭ ನಿಮ್ಮದಾದರೂ ಸಹ ಖರ್ಚು ವೆಚ್ಚ ಕೂಡ ಹೆಚ್ಚಾಗಲಿದೆ. ಸಂಗಾತಿಯ ಅಭಿಪ್ರಾಯಗಳಿಗೆ ಆದ್ಯತೆ ನೀಡಿ. ನವದಂಪತಿಗೆ ಸಂತಾನ ಭಾಗ್ಯವಿದೆ. ಕಚೇರಿ ಕೆಲಸದ ನಿಮಿತ್ತ ದೂರ ಪ್ರಯಾಣ ಮಾಡಲಿದ್ದೀರಿ.

ಧನು : ಸ್ನೇಹಿತರ ಇಷ್ಟಕ್ಕೆ ವಿರುದ್ಧವಾಗಿ ನಡೆಯಬೇಕಾದ ಕಾಲ ಬರಬಹುದು. ಮೇಲಾಧಿಕಾರಿಗಳಿಂದ ಪ್ರಶಂಸೆ ಗಳಿಸಲಿದ್ದೀರಿ. ವೃತ್ತಿರಂಗದಲ್ಲಿ ಹೊಸ ಜವಾಬ್ದಾರಿಯೊಂದು ನಿಮ್ಮ ಹೆಗಲೇರಲಿದೆ. ಜವಳಿ ಉದ್ಯಮದವರಿಗೆ ಲಾಭ ಕಾದಿದೆ.

ಮಕರ : ವೈದ್ಯಕೀಯ ವೃತ್ತಿಯವರಿಗೆ ಇದು ಒತ್ತಡದ ದಿನವಾಗಿರಲಿದೆ. ಕೋರ್ಟ್, ಕಚೇರಿ ಕೆಲಸದಲ್ಲಿ ನಿಮಗೆ ಜಯ ಪ್ರಾಪ್ತಿಯಾಗಲಿದೆ. ಸರ್ಕಾರಿ ಕೆಲಸಗಳು ಸಾಂಘವಾಗಿ ನೆರವೇರಲಿದೆ. ವೈಯಕ್ತಿಕ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಿ.

ಕುಂಭ : ಧಾರ್ಮಿಕ ವಿಚಾರಗಳತ್ತ ಗಮನ ಹರಿಸುತ್ತೀರಿ. ಲೌಕಿಕ ವಿಚಾರಗಳ ಮೇಲಿದ್ದ ಆಸಕ್ತಿ ಕ್ರಮೇಣವಾಗಿ ಕಡಿಮೆ ಆಗಲಿದೆ. ಕುಟುಂಬ ಸದಸ್ಯರ ಜೊತೆ ಅನಗತ್ಯ ವಾದ ಬೇಡ.

ಮೀನ : ಎಂತಹ ಕಠಿಣ ಸಂದರ್ಭದಲ್ಲೂ ಸಹನೆ ಕಾಯ್ದುಕೊಳ್ಳಿ. ವೃತ್ತಿರಂಗದಲ್ಲಿ ಕೊಂಚ ಕಿರಿಕಿರಿ ಎದುರಾಗಲಿದೆ. ದಾಂಪತ್ಯ ಜೀವನದಲ್ಲಿ ಸಮಸ್ಯೆ ತೋರಿಬಂದರೂ ನಿಮ್ಮ ತಾಳ್ಮೆಯಿಂದ ಸವಾಲುಗಳನ್ನ ಎದುರಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಇದೆ

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

18 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

20 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

20 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

20 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

21 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

21 hours ago