Featured

16-07-2021 : ಇಂದಿನ ದಿನ ಭವಿಷ್ಯ -Vishwanews24

16-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಸಾಂಸಾರಿಕ ಜೀವನದಲ್ಲಿ ಬಹುದಿನಗಳಿಂದ ಇದ್ದ ಕಿರಿಕಿರಿ ದೂರಾಗಿ ನೆಮ್ಮದಿ ನೆಲೆಸಲಿದೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ಕಾಲ ಕೊನೆಗೂ ಕೂಡಿ ಬರಲಿದೆ. ವ್ಯಾಪಾರಿಗಳಿಗೆ ದಿನದ ಕೊನೆಯಲ್ಲಿ ಲಾಭ ಸಿಗಲಿದೆ.

ವೃಷಭ : ದೂರ ಪ್ರಯಾಣದ ಕೆಲಸಗಳನ್ನ ಮುಂದೂಡಲಿದ್ದೀರಿ. ಇದಕ್ಕೆ ನಿಮ್ಮ ಆರೋಗ್ಯ ಸಮಸ್ಯೆಯೇ ಕಾರಣ. ಹೀಗಾಗಿ ಆರೋಗ್ಯದ ಕಡೆ ಜಾಗ್ರತೆ ವಹಿಸಿ. ಸಾರ್ವಜನಿಕ ರಂಗದಲ್ಲಿ ರಾಜಕಾರಣಿಗಳಿಗೆ ಉತ್ತಮ ಪ್ರಶಂಸೆ ಸಿಗಲಿದೆ.

ಮಿಥುನ : ಕಚೇರಿ ಕೆಲಸದಲ್ಲಿ ನೆಮ್ಮದಿ ಇದೆ. ಕೃಷಿ ರಂಗದ ಕಾರ್ಯಗಳೂ ಸಹ ಯಾವುದೇ ಕಿರಿಕಿರಿ ಇಲ್ಲದೇ ಸಾಂಘವಾಗಿ ನೆರವೇರಲಿದೆ. ನಿರುದ್ಯೋಗಿಗಳಿಗೆ ಕಷ್ಟ ತಪ್ಪಿದ್ದಲ್ಲ. ಕುಲದೇವತೆಯನ್ನ ಆರಾಧಿಸಿ.

ಕಟಕ : ವಿದ್ಯಾರ್ಥಿಗಳಿಗೆ ಹಿನ್ನಡೆ ಉಂಟಾಗಲಿದೆ. ಮದುವೆಗಾಗಿ ಅರಸುತ್ತಿರುವವರಿಗೆ ಉತ್ತಮ ಸಂಬಂಧ ಕೂಡಿ ಬರಲಿದೆ. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯುವ ಮುನ್ಸೂಚನೆ ಸಿಗಲಿದೆ. ಮೇಲಾಧಿಕಾರಿಗಳಿಂದ ಪ್ರಶಂಸೆ ಗಳಿಸಲಿದ್ದೀರಿ.

ಸಿಂಹ : ಪಿತ್ರಾರ್ಜಿತ ಆಸ್ತಿಯಲ್ಲಿ ಇದ್ದ ಕಿರಿಕಿರಿ ಹಾಗೆಯೇ ಮುಂದುವರಿಯಲಿದೆ. ಜವಳಿ ಉದ್ಯಮಿಗಳಿಗೆ ಇಂದು ಲಾಭ ಕಾದಿದೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ. ಪೋಷಕರ ಆರೋಗ್ಯದ ಕಡೆಗೆ ಜಾಗ್ರತೆ ವಹಿಸಿ.

ಕನ್ಯಾ : ಕೆಲಸದ ಸ್ಥಳವನ್ನ ಬದಲಾವಣೆ ಮಾಡುವ ಸಾಧ್ಯತೆ ಇದೆ. ಮನೆಯಲ್ಲಿನ ಮನಸ್ತಾಪಗಳಿಗೆ ನೀವೇ ಕಾರಣ ಆಗಬಹುದು. ನಿಮ್ಮ ಮೇಲೆ ಅಪವಾದ ಎದುರಾಗುವ ಸಾಧ್ಯತೆ ಇದೆ. ಪೋಷಕರೊಂದಿಗೆ ಅನಗತ್ಯ ವಾದ ಬೇಡ.

ತುಲಾ : ಮನೆಯಲ್ಲಿ ಧಾರ್ಮಿಕ ಕಾರ್ಯಗಳು ಸ್ಥಗಿತಗೊಳ್ಳಲಿದೆ. ಕುಟುಂಬದವರಲ್ಲಿ ಆತಂಕದ ವಾತಾವರಣ ಉಂಟಾಗಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಿ. ಗುರು ರಾಘವೇಂದ್ರನ ಧ್ಯಾನ ಮಾಡಿ.

ವೃಶ್ಚಿಕ : ವ್ಯವಹಾರದಲ್ಲಿ ಲಾಭ ನಿಮ್ಮದಾದರೂ ಸಹ ಖರ್ಚು ವೆಚ್ಚ ಕೂಡ ಹೆಚ್ಚಾಗಲಿದೆ. ಸಂಗಾತಿಯ ಅಭಿಪ್ರಾಯಗಳಿಗೆ ಆದ್ಯತೆ ನೀಡಿ. ನವದಂಪತಿಗೆ ಸಂತಾನ ಭಾಗ್ಯವಿದೆ. ಕಚೇರಿ ಕೆಲಸದ ನಿಮಿತ್ತ ದೂರ ಪ್ರಯಾಣ ಮಾಡಲಿದ್ದೀರಿ.

ಧನು : ಸ್ನೇಹಿತರ ಇಷ್ಟಕ್ಕೆ ವಿರುದ್ಧವಾಗಿ ನಡೆಯಬೇಕಾದ ಕಾಲ ಬರಬಹುದು. ಮೇಲಾಧಿಕಾರಿಗಳಿಂದ ಪ್ರಶಂಸೆ ಗಳಿಸಲಿದ್ದೀರಿ. ವೃತ್ತಿರಂಗದಲ್ಲಿ ಹೊಸ ಜವಾಬ್ದಾರಿಯೊಂದು ನಿಮ್ಮ ಹೆಗಲೇರಲಿದೆ. ಜವಳಿ ಉದ್ಯಮದವರಿಗೆ ಲಾಭ ಕಾದಿದೆ.

ಮಕರ : ವೈದ್ಯಕೀಯ ವೃತ್ತಿಯವರಿಗೆ ಇದು ಒತ್ತಡದ ದಿನವಾಗಿರಲಿದೆ. ಕೋರ್ಟ್, ಕಚೇರಿ ಕೆಲಸದಲ್ಲಿ ನಿಮಗೆ ಜಯ ಪ್ರಾಪ್ತಿಯಾಗಲಿದೆ. ಸರ್ಕಾರಿ ಕೆಲಸಗಳು ಸಾಂಘವಾಗಿ ನೆರವೇರಲಿದೆ. ವೈಯಕ್ತಿಕ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಿ.

ಕುಂಭ : ಧಾರ್ಮಿಕ ವಿಚಾರಗಳತ್ತ ಗಮನ ಹರಿಸುತ್ತೀರಿ. ಲೌಕಿಕ ವಿಚಾರಗಳ ಮೇಲಿದ್ದ ಆಸಕ್ತಿ ಕ್ರಮೇಣವಾಗಿ ಕಡಿಮೆ ಆಗಲಿದೆ. ಕುಟುಂಬ ಸದಸ್ಯರ ಜೊತೆ ಅನಗತ್ಯ ವಾದ ಬೇಡ.

ಮೀನ : ಎಂತಹ ಕಠಿಣ ಸಂದರ್ಭದಲ್ಲೂ ಸಹನೆ ಕಾಯ್ದುಕೊಳ್ಳಿ. ವೃತ್ತಿರಂಗದಲ್ಲಿ ಕೊಂಚ ಕಿರಿಕಿರಿ ಎದುರಾಗಲಿದೆ. ದಾಂಪತ್ಯ ಜೀವನದಲ್ಲಿ ಸಮಸ್ಯೆ ತೋರಿಬಂದರೂ ನಿಮ್ಮ ತಾಳ್ಮೆಯಿಂದ ಸವಾಲುಗಳನ್ನ ಎದುರಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಇದೆ

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

3 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

4 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

5 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago