Featured

16-07-2021 : ಇಂದಿನ ದಿನ ಭವಿಷ್ಯ -Vishwanews24

16-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಸಾಂಸಾರಿಕ ಜೀವನದಲ್ಲಿ ಬಹುದಿನಗಳಿಂದ ಇದ್ದ ಕಿರಿಕಿರಿ ದೂರಾಗಿ ನೆಮ್ಮದಿ ನೆಲೆಸಲಿದೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ಕಾಲ ಕೊನೆಗೂ ಕೂಡಿ ಬರಲಿದೆ. ವ್ಯಾಪಾರಿಗಳಿಗೆ ದಿನದ ಕೊನೆಯಲ್ಲಿ ಲಾಭ ಸಿಗಲಿದೆ.

ವೃಷಭ : ದೂರ ಪ್ರಯಾಣದ ಕೆಲಸಗಳನ್ನ ಮುಂದೂಡಲಿದ್ದೀರಿ. ಇದಕ್ಕೆ ನಿಮ್ಮ ಆರೋಗ್ಯ ಸಮಸ್ಯೆಯೇ ಕಾರಣ. ಹೀಗಾಗಿ ಆರೋಗ್ಯದ ಕಡೆ ಜಾಗ್ರತೆ ವಹಿಸಿ. ಸಾರ್ವಜನಿಕ ರಂಗದಲ್ಲಿ ರಾಜಕಾರಣಿಗಳಿಗೆ ಉತ್ತಮ ಪ್ರಶಂಸೆ ಸಿಗಲಿದೆ.

ಮಿಥುನ : ಕಚೇರಿ ಕೆಲಸದಲ್ಲಿ ನೆಮ್ಮದಿ ಇದೆ. ಕೃಷಿ ರಂಗದ ಕಾರ್ಯಗಳೂ ಸಹ ಯಾವುದೇ ಕಿರಿಕಿರಿ ಇಲ್ಲದೇ ಸಾಂಘವಾಗಿ ನೆರವೇರಲಿದೆ. ನಿರುದ್ಯೋಗಿಗಳಿಗೆ ಕಷ್ಟ ತಪ್ಪಿದ್ದಲ್ಲ. ಕುಲದೇವತೆಯನ್ನ ಆರಾಧಿಸಿ.

ಕಟಕ : ವಿದ್ಯಾರ್ಥಿಗಳಿಗೆ ಹಿನ್ನಡೆ ಉಂಟಾಗಲಿದೆ. ಮದುವೆಗಾಗಿ ಅರಸುತ್ತಿರುವವರಿಗೆ ಉತ್ತಮ ಸಂಬಂಧ ಕೂಡಿ ಬರಲಿದೆ. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯುವ ಮುನ್ಸೂಚನೆ ಸಿಗಲಿದೆ. ಮೇಲಾಧಿಕಾರಿಗಳಿಂದ ಪ್ರಶಂಸೆ ಗಳಿಸಲಿದ್ದೀರಿ.

ಸಿಂಹ : ಪಿತ್ರಾರ್ಜಿತ ಆಸ್ತಿಯಲ್ಲಿ ಇದ್ದ ಕಿರಿಕಿರಿ ಹಾಗೆಯೇ ಮುಂದುವರಿಯಲಿದೆ. ಜವಳಿ ಉದ್ಯಮಿಗಳಿಗೆ ಇಂದು ಲಾಭ ಕಾದಿದೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ. ಪೋಷಕರ ಆರೋಗ್ಯದ ಕಡೆಗೆ ಜಾಗ್ರತೆ ವಹಿಸಿ.

ಕನ್ಯಾ : ಕೆಲಸದ ಸ್ಥಳವನ್ನ ಬದಲಾವಣೆ ಮಾಡುವ ಸಾಧ್ಯತೆ ಇದೆ. ಮನೆಯಲ್ಲಿನ ಮನಸ್ತಾಪಗಳಿಗೆ ನೀವೇ ಕಾರಣ ಆಗಬಹುದು. ನಿಮ್ಮ ಮೇಲೆ ಅಪವಾದ ಎದುರಾಗುವ ಸಾಧ್ಯತೆ ಇದೆ. ಪೋಷಕರೊಂದಿಗೆ ಅನಗತ್ಯ ವಾದ ಬೇಡ.

ತುಲಾ : ಮನೆಯಲ್ಲಿ ಧಾರ್ಮಿಕ ಕಾರ್ಯಗಳು ಸ್ಥಗಿತಗೊಳ್ಳಲಿದೆ. ಕುಟುಂಬದವರಲ್ಲಿ ಆತಂಕದ ವಾತಾವರಣ ಉಂಟಾಗಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಿ. ಗುರು ರಾಘವೇಂದ್ರನ ಧ್ಯಾನ ಮಾಡಿ.

ವೃಶ್ಚಿಕ : ವ್ಯವಹಾರದಲ್ಲಿ ಲಾಭ ನಿಮ್ಮದಾದರೂ ಸಹ ಖರ್ಚು ವೆಚ್ಚ ಕೂಡ ಹೆಚ್ಚಾಗಲಿದೆ. ಸಂಗಾತಿಯ ಅಭಿಪ್ರಾಯಗಳಿಗೆ ಆದ್ಯತೆ ನೀಡಿ. ನವದಂಪತಿಗೆ ಸಂತಾನ ಭಾಗ್ಯವಿದೆ. ಕಚೇರಿ ಕೆಲಸದ ನಿಮಿತ್ತ ದೂರ ಪ್ರಯಾಣ ಮಾಡಲಿದ್ದೀರಿ.

ಧನು : ಸ್ನೇಹಿತರ ಇಷ್ಟಕ್ಕೆ ವಿರುದ್ಧವಾಗಿ ನಡೆಯಬೇಕಾದ ಕಾಲ ಬರಬಹುದು. ಮೇಲಾಧಿಕಾರಿಗಳಿಂದ ಪ್ರಶಂಸೆ ಗಳಿಸಲಿದ್ದೀರಿ. ವೃತ್ತಿರಂಗದಲ್ಲಿ ಹೊಸ ಜವಾಬ್ದಾರಿಯೊಂದು ನಿಮ್ಮ ಹೆಗಲೇರಲಿದೆ. ಜವಳಿ ಉದ್ಯಮದವರಿಗೆ ಲಾಭ ಕಾದಿದೆ.

ಮಕರ : ವೈದ್ಯಕೀಯ ವೃತ್ತಿಯವರಿಗೆ ಇದು ಒತ್ತಡದ ದಿನವಾಗಿರಲಿದೆ. ಕೋರ್ಟ್, ಕಚೇರಿ ಕೆಲಸದಲ್ಲಿ ನಿಮಗೆ ಜಯ ಪ್ರಾಪ್ತಿಯಾಗಲಿದೆ. ಸರ್ಕಾರಿ ಕೆಲಸಗಳು ಸಾಂಘವಾಗಿ ನೆರವೇರಲಿದೆ. ವೈಯಕ್ತಿಕ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಿ.

ಕುಂಭ : ಧಾರ್ಮಿಕ ವಿಚಾರಗಳತ್ತ ಗಮನ ಹರಿಸುತ್ತೀರಿ. ಲೌಕಿಕ ವಿಚಾರಗಳ ಮೇಲಿದ್ದ ಆಸಕ್ತಿ ಕ್ರಮೇಣವಾಗಿ ಕಡಿಮೆ ಆಗಲಿದೆ. ಕುಟುಂಬ ಸದಸ್ಯರ ಜೊತೆ ಅನಗತ್ಯ ವಾದ ಬೇಡ.

ಮೀನ : ಎಂತಹ ಕಠಿಣ ಸಂದರ್ಭದಲ್ಲೂ ಸಹನೆ ಕಾಯ್ದುಕೊಳ್ಳಿ. ವೃತ್ತಿರಂಗದಲ್ಲಿ ಕೊಂಚ ಕಿರಿಕಿರಿ ಎದುರಾಗಲಿದೆ. ದಾಂಪತ್ಯ ಜೀವನದಲ್ಲಿ ಸಮಸ್ಯೆ ತೋರಿಬಂದರೂ ನಿಮ್ಮ ತಾಳ್ಮೆಯಿಂದ ಸವಾಲುಗಳನ್ನ ಎದುರಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಇದೆ

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

1 hour ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

7 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

9 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

9 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

9 hours ago