ಬೆಂಗಳೂರು: 2019ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ವಾರದೊಳಗೆ ಪ್ರಕಟವಾಗಲಿದೆ. ಇದೇ ಮೊದಲ ಬಾರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಿಇಟಿ ಪರೀಕ್ಷೆ ಆರಂಭಕ್ಕೂ ಮುನ್ನವೇ ಫಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸುತ್ತಿರುವುದರಿಂದ ಏ.17ರಂದು ಪ್ರಕಟವಾಗುವುದು ಖಚಿತವಾಗಿದೆ.
ಸಿಇಟಿ ಏ.29ರಿಂದ ಮೇ 1ರವರೆಗೆ ನಡೆಯಲಿದೆ. ಪಿಯುನಲ್ಲಿ ವಿಜ್ಞಾನ ವಿಷಯ ವ್ಯಾಸಂಗ ಮಾಡಿರುವ ಬಹುತೇಕ ವಿದ್ಯಾರ್ಥಿಗಳು ಸಿಇಟಿ ಬರೆಯುವುದರಿಂದ ವಿದ್ಯಾರ್ಥಿಗಳ ಒತ್ತಡ ಕಡಿಮೆ ಮಾಡಿ ನಿರಾಳವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಪಿಯು ಫಲಿತಾಂಶವನ್ನು ಶೀಘ್ರ ಪ್ರಕಟಿಸಲು ತೀರ್ವನಿಸಲಾಗಿದೆ. ಪಿಯು ಇಲಾಖೆ ನಿರ್ದೇಶಕರಾಗಿದ್ದ ಪಿ.ಸಿ. ಜಾಫರ್ ದ್ವಿತೀಯ ಪಿಯು ಪರೀಕ್ಷೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯನ್ನು ಸಮರ್ಥವಾಗಿ ನಿರ್ವಹಣೆ ಮಾಡಿದ್ದರು.
ಇದರ ಪರಿಣಾಮ ಪಿಯು ಮೌಲ್ಯಮಾಪನ ಶೇ.90 ಮುಗಿದಿದೆ. ಫಲಿತಾಂಶ ಬಿಡುಗಡೆ ಮಾಡುವ ಪ್ರಕ್ರಿಯೆಗಳಿಗೆ ಬೇಕಾದ ಸಿದ್ಧತೆ ಮಾಡಿಕೊಳ್ಳಲು ಪಿಯು ಇಲಾಖೆಗೆ ಕೆಲ ದಿನಗಳ ಅವಶ್ಯಕತೆ ಇರುವುದರಿಂದ ಒಂದು ವಾರದೊಳಗೆ ಫಲಿತಾಂಶ ಪ್ರಕಟಿಸಲಿದೆ. ಈ ವರ್ಷ ಮೌಲ್ಯಮಾಪಕರು ಅಂಕಗಳನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಿರುವುದರಿಂದ ಫಲಿತಾಂಶದ ಸಿದ್ಧತೆ ಕೆಲಸ ಪಿಯು ಇಲಾಖೆಗೆ ಸರಳವಾಗಿದೆ. ಬುಧವಾರ ಪಿಯು ನಿರ್ದೇಶಕರಾಗಿ ಸಿ.ಶಿಖಾ ಅಧಿಕಾರವಹಿಸಿಕೊಂಡಿದ್ದು, ಫಲಿತಾಂಶ ಪ್ರಕಟಣೆಗೆ ಸಿದ್ಧತೆ ಆರಂಭಿಸಿದ್ದಾರೆ. 2019ನೇ ಸಾಲಿನಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ವಿದ್ಯಾರ್ಥಿಗಳಿಗೆ ಅನುಕೂಲ: ಸಿಇಟಿ ಮೊದಲಿಗೆ ಪಿಯು ಫಲಿತಾಂಶ ಪ್ರಕಟವಾಗುವುದರಿಂದ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ಕಡಿಮೆಯಾಗಲಿದೆ. ಪಿಯುನಲ್ಲಿ ಕಡಿಮೆ ಅಂಕಗಳಿಸಿದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ತೆಗೆದುಕೊಳ್ಳಬೇಕೇ ಅಥವಾ ಬೇಡವೇ ಎಂದು ನಿರ್ಧರಿಸಲು ಅನುಕೂಲವಾಗಲಿದೆ. ಸಿಇಟಿ ಫಲಿತಾಂಶದ ವೇಳೆ ಶೇ.50 ಪಿಯು ಮತ್ತು ಶೇ.50 ಸಿಇಟಿ ಅಂಕಗಳನ್ನು ಪರಿಗಣಿಸಲಾಗುತ್ತದೆ. ಈ ವರ್ಷ 1.94 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…