Featured

17,800 ಅಂಗನವಾಡಿಗಳು ಶೀಘ್ರದಲ್ಲೇ ಸರ್ಕಾರಿ ಮಾಂಟೆಸ್ಸರಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – vishwanews24

17,800 ಅಂಗನವಾಡಿಗಳು ಶೀಘ್ರದಲ್ಲೇ ಸರ್ಕಾರಿ ಮಾಂಟೆಸ್ಸರಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯದ 17,800 ಅಂಗನವಾಡಿಗಳನ್ನು ಶೀಘ್ರದಲ್ಲೇ ಸರ್ಕಾರಿ ಮಾಂಟೆಸ್ಸರಿ’ಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಹೇಳಿದರು.

ಲಕ್ಕವಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ, ಅಂಗನವಾಡಿಗಳನ್ನು ಸರ್ಕಾರಿ ಮಾಂಟೆಸ್ಸರಿ’ಗಳಾಗಿ ಮೇಲ್ದರ್ಜೆಗೇರಿಸುವ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಇದಲ್ಲದೆ, ಕೇಂದ್ರ ಸರ್ಕಾರವು ಈ ಉಪಕ್ರಮವನ್ನು ಶ್ಲಾಘಿಸಿದೆ ಮತ್ತು ಆರ್ಥಿಕ ಬೆಂಬಲವನ್ನು ನೀಡಿದೆ ಎಂದು ಹೇಳಿದರು.

ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಕೆಲವೊಂದು ಮಾರ್ಗಸೂಚಿಗಳನ್ನು ಸಿದ್ಧಪಡಿಸಿಕೊಂಡಿದ್ದು, ಎರಡು ಕೊಠಡಿ, ಶೌಚಾಲಯ ವ್ಯವಸ್ಥೆ ಇರಬೇಕು. ಇಂತಹ ವ್ಯವಸ್ಥೆ ಹೊಂದಿರುವ 17,800 ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳಲಿವೆ. ಈ ಅಂಗನವಾಡಿಗಳಲ್ಲಿನ ಶಿಕ್ಷಕರು ತಮ್ಮ ಶೈಕ್ಷಣಿಕ ಅರ್ಹತೆಯಾಗಿ ಕನಿಷ್ಠ ಪಿಯುಸಿ-II ಅಥವಾ ಪದವಿಯನ್ನು ಪಡೆದಿರಬೇಕು. ಪ್ರಾಯೋಗಿಕ ಯೋಜನೆಯಾಗಿ ಈಗಾಗಲೇ ಬೆಂಗಳೂರಿನಲ್ಲಿ 250 ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿದ್ದೇವೆ. ಉಳಿದ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಈ ಉಪಕ್ರಮಕ್ಕೆ ಹಣವನ್ನು ಸಕ್ಷಮ್ ಅಂಗನವಾಡಿ ಯೋಜನೆಯಡಿ ಮೀಸಲಿಡಲಾಗಿದೆ. ಕೇಂದ್ರ ಸರ್ಕಾರ ಈ ಉದ್ದೇಶಕ್ಕಾಗಿ ಒಂದು ವಾರದಲ್ಲಿ 170 ಕೋಟಿ ರೂ. ನೀಡಲಿದೆ ಎಂದರು

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

15 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

15 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

15 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

15 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago