ಮೇಷ ರಾಶಿ
ವ್ಯಾಪಾರದಲ್ಲಿ ತೊಡಗಿಕೊಳ್ಳುತ್ತೀರಿ, ಅದರಲ್ಲೇ ಲಾಭವೂ ಆಗಲಿದೆ. ಕೆಲಸದಲ್ಲಿ ಯಶಸ್ಸು ಸಿಗುವುದು ವಿಳಂಬವಾಗಬಹುದು. ಮಧ್ಯಾಹ್ನದ ನಂತರ ಪರಿಸ್ಥಿತಿ ಉತ್ತಮವಾಗಿರುತ್ತದೆ.
ವೃಷಭ ರಾಶಿ
ಮನೆ ಮತ್ತು ಕಚೇರಿಯಲ್ಲಿ ದಿನ ಉತ್ತಮವಾಗಿ ಕಳೆಯಲಿದೆ. ಕೆಲಸದ ಒತ್ತಡದಿಂದಾಗಿ ಆರೋಗ್ಯ ಕೊಂಚ ಏರುಪೇರಾಗಬಹುದು. ಮಿತ್ರರ ಭೇಟಿಯಿಂದ ಆನಂದಿತರಾಗಲಿದ್ದೀರಿ.
ಮಿಥುನ ರಾಶಿ
ಇಂದು ನಿಮಗೆ ಅನುಕೂಲಕರ ದಿನ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಕೃಪಾದೃಷ್ಟಿ ನಿಮ್ಮ ಮೇಲಿರುತ್ತದೆ. ಆಕಸ್ಮಿಕ ಧನಲಾಭವಾಗಬಹುದು. ಬಾಕಿ ವಸೂಲಿ ಮಾಡಲಿದ್ದೀರಿ.
ಕರ್ಕ ರಾಶಿ
ವ್ಯವಹಾರದಲ್ಲಿ ಸಮಸ್ಯೆಯಾಗುವುದಿಲ್ಲ. ತವರಿನಿಂದ ಶುಭ ಸಮಾಚಾರ ಬರುತ್ತದೆ. ಮನೆಯಲ್ಲಿ ಆಹ್ಲಾದಕರ ವಾತಾವರಣವಿರುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ.
ಸಿಂಹ ರಾಶಿ
ಬೆಳಗ್ಗೆ ಮಿತ್ರರೊಂದಿಗೆ ಸುತ್ತಾಟ, ಮೋಜು-ಮಸ್ತಿ, ಮನರಂಜನೆಯಲ್ಲಿ ಕಾಲ ಕಳೆಯಲಿದ್ದೀರಿ. ಪಾಲುದಾರರೊಂದಿಗೆ ಸಂಬಂಧ ಉತ್ತಮವಾಗಿರುತ್ತದೆ. ಮಧ್ಯಾಹ್ನದ ನಂತರ ಪ್ರತಿಕೂಲತೆಯನ್ನು ಎದುರಿಸಬೇಕಾಗುತ್ತದೆ.
ಕನ್ಯಾ ರಾಶಿ
ಆಲಸ್ಯ ಮತ್ತು ಆಯಾಸದಿಂದ ನಿಮ್ಮ ಕೆಲಸ ಮಂದಗತಿಯಲ್ಲಿ ಸಾಗುತ್ತದೆ. ಉದರ ಬಾಧೆ ಕಾಣಿಸಿಕೊಳ್ಳಬಹುದು. ಉದ್ಯೋಗದಲ್ಲಿ ತೊಂದರೆ ಎದುರಾಗಬಹುದು. ಹಿರಿಯ ಅಧಿಕಾರಿಗಳಿಂದ ದೂರವೇ ಇರಿ.
ತುಲಾ ರಾಶಿ
ಹೊಸ ಕಾರ್ಯ ಆರಂಭಿಸಲು ಇಂದು ಶುಭ ದಿನ. ಪ್ರಿಯ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ. ಭಾಗ್ಯವೃದ್ಧಿಯಾಗಲಿದೆ. ಸಮಾಜದಲ್ಲಿ ಗೌರವ – ಪ್ರತಿಷ್ಠೆ ದೊರೆಯುತ್ತದೆ.
ವೃಶ್ಚಿಕ ರಾಶಿ
ಕಾರ್ಯ ಅಪೂರ್ಣವಾಗಿರುವುದರಿಂದ ಹತಾಶೆಯ ಅನುಭವವಾಗುತ್ತದೆ. ಯಾವುದೇ ಮಹತ್ವದ ವಿಷಯದಲ್ಲಿ ಇಂದು ನಿರ್ಣಯ ತೆಗೆದುಕೊಳ್ಳಬೇಡಿ. ಕುಟುಂಬದಲ್ಲಿ ಕ್ಲೇಶಮಯ ವಾತಾವರಣವಿರುತ್ತದೆ.
ಧನು ರಾಶಿ
ಇಂದು ನಿಮಗೆ ಶುಭದಿನ. ಕಾರ್ಯಸಿದ್ಧಿ ಮತ್ತು ಧನ ಪ್ರಾಪ್ತಿ ಯೋಗವಿದೆ. ಶಾರೀರಿಕ ಮತ್ತು ಮಾನಸಿಕವಾಗಿ ಉತ್ಸಾಹದಿಂದಿರುತ್ತೀರಿ. ಪ್ರವಾಸಕ್ಕೆ ತೆರಳುವ ಸಾಧ್ಯತೆ ಇದೆ.
ಮಕರ ರಾಶಿ
ಇಂದು ಮೋಜು-ಮಸ್ತಿ ಮತ್ತು ಮನರಂಜನೆಯಲ್ಲಿ ಸಮಯ ಕಳೆಯುತ್ತೀರಿ. ಮಿತ್ರರು ಮತ್ತು ಕುಟುಂಬಸ್ಥರೊಂದಿಗೆ ಸುತ್ತಾಡಲು ತೆರಳಲಿದ್ದೀರಿ. ಮನೆಯಲ್ಲಿ ಸಂತೋಷದ ವಾತಾವರಣವಿರುತ್ತದೆ.
ಕುಂಭ ರಾಶಿ
ಇಂದು ನಿಮಗೆ ಅತ್ಯಂತ ಲಾಭದಾಯಕ ದಿನ. ಸಾಮಾಜಿಕ ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯರಾಗಿರುತ್ತೀರಾ. ಮಧ್ಯಾಹ್ನದ ನಂತರ ಮನೆಯಲ್ಲಿ ಆತಂಕದ ವಾತಾವರಣ ಉಂಟಾಗಬಹುದು.
ಮೀನ ರಾಶಿ
ನೌಕರಿ ಮತ್ತು ವ್ಯಾಪಾರದಲ್ಲಿ ಯಶಸ್ಸು ಸಿಗುತ್ತದೆ. ಹಿರಿಯ ಅಧಿಕಾರಿಗಳು ನಿಮ್ಮ ಕೆಲಸದಿಂದ ಪ್ರಸನ್ನರಾಗುತ್ತಾರೆ. ವ್ಯಾಪಾರ ವೃದ್ಧಿಸಲಿದೆ, ಬಾಕಿ ಹಣ ವಸೂಲಿಯಾಗುತ್ತದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…