18 ಫೆಬ್ರವರಿ ಭಾನುವಾರ- ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ : ಸಭಾಪತಿ ಯುಟಿ ಖಾದರ್ ಭಾಗಿ
18 ಫೆಬ್ರವರಿ ಭಾನುವಾರ- ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ : ಸಭಾಪತಿ ಯುಟಿ ಖಾದರ್ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ.
ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ18 ಭಾನುವಾರ ಪೂರ್ವಾಹ್ನ 10 ಗಂಟೆಗೆ ನಡೆಯಲಿದೆ . ಬ್ಯಾಂಕಿಂಗ್ ಕಟ್ಟಡದ ಉದ್ಘಾಟನೆ ಕರ್ನಾಟಕ ಸರ್ಕಾರದ ವಿಧಾನ ಸಭಾಧ್ಯಕ್ಷ ಯುಟಿ ಖಾದರ್ ನೆರೆವೇರಿಸಲಿದ್ದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದೀಪ ಪ್ರಜ್ವಲನೆಯ ಉದ್ಘಾಟನೆ ಮಾಡಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ವೈ ಸುಧಿರ್ ಕುಮಾರ್ ವಹಿಸಲಿದ್ದಾರೆ.ಸ್ಥಳೀಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನಚಂದ್ರ ಡಿ ಸುವರ್ಣ, ಶ್ರೀ ಬಿ ಜಯಕರ ಶೆಟ್ಟಿ ಇಂದ್ರಾಳಿ, ನಿರ್ದೇಶಕರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ, ನಿರ್ದೇಶಕರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ.. ಬೆಂಗಳೂರು, ಸಹಿತ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿರುವರು.

