1984ರ ಸಿಖ್ ವಿರೋಧಿ ದಂಗೆ ಪ್ರಕರಣ : 34 ವರ್ಷಗಳ ನಂತರ ಮಹತ್ವದ ತೀರ್ಪು ; ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ಗೆ ಜೀವವಾಧಿ ಶಿಕ್ಷೆ
ದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ನಂತರ ಮಹತ್ವದ ತೀರ್ಪು ಹೊರಬಿದ್ದಿದ್ದು, ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ದೋಷಿ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.
ಈ ಸಂಬಂಧಪಟ್ಟಂತೆ ಡಿ.17ರ ಸೋಮವಾರ ದೆಹಲಿ ಹೈಕೋರ್ಟ್ ಸಜ್ಜನ್ ಅವರಿಗೆ ರಾಜಕೀಯ ಪ್ರೋತ್ಸಾಹ ಸಿಕ್ಕಿರುವುದಾಗಿ ಕೋರ್ಟ್ ಅಭಿಪ್ರಾಯಪಟ್ಟಿದೆ. ತೀರ್ಪಿಗೆ ಹರ್ಷ ವ್ಯಕ್ತಪಡಿಸಿರುವ ಅರ್ಜಿದಾರೆ ಚಮನ್ ಕೌರ್, ನನ್ನ ತಂದೆಯನ್ನು ಸಿಖ್ ಎನ್ನುವ ಕಾರಣಕ್ಕೆ ಜೀವಂತ ದಹಿಸಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಸಜ್ಜನ್ ಕುಮಾರ್ಗೆ ಜೀವಾವಧಿ ಶಿಕ್ಷೆ ನೀಡಿ ಕೋರ್ಟ್ ತೀರ್ಪು ಪ್ರಕಟಿಸಿದೆ. 1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್ಮೆಂಟ್ ಏರಿಯಾದಲ್ಲಿ ಗಲಭೆ ನಡೆದು ಐವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್ ಮುರಳೀಧರ್ ಹಾಗೂ ನ್ಯಾ. ವಿನೋದ್ ಗೋಯಲ್ ಅವರ ಪೀಠ ಇಂದು ತೀರ್ಪು ಪ್ರಕಟಿಸಿದೆ. ಡಿಸೆಂಬರ್ 31ರ ಒಳಗೆ ಸಜ್ಜನ್ ಕುಮಾರ್ ಶರಣಾಗಬೇಕಿದೆ.

