1984ರ ಸಿಖ್ ವಿರೋಧಿ ದಂಗೆ ಪ್ರಕರಣ : 34 ವರ್ಷಗಳ ನಂತರ ಮಹತ್ವದ ತೀರ್ಪು ; ಕಾಂಗ್ರೆಸ್​ ನಾಯಕ ಸಜ್ಜನ್ ಕುಮಾರ್​ಗೆ ಜೀವವಾಧಿ ಶಿಕ್ಷೆ

Featured, ದೇಶ

ದೆಹಲಿ: 1984ರ ಸಿಖ್​ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ನಂತರ ಮಹತ್ವದ ತೀರ್ಪು ಹೊರಬಿದ್ದಿದ್ದು,  ಕಾಂಗ್ರೆಸ್​ ನಾಯಕ ಸಜ್ಜನ್​ ಕುಮಾರ್ ದೋಷಿ ಎಂದು ದೆಹಲಿ ಹೈಕೋರ್ಟ್​​ ತೀರ್ಪು ನೀಡಿದೆ.

ಈ ಸಂಬಂಧಪಟ್ಟಂತೆ ಡಿ.17ರ ಸೋಮವಾರ ದೆಹಲಿ ಹೈಕೋರ್ಟ್ ಸಜ್ಜನ್ ಅವರಿಗೆ ರಾಜಕೀಯ ಪ್ರೋತ್ಸಾಹ ಸಿಕ್ಕಿರುವುದಾಗಿ ಕೋರ್ಟ್ ಅಭಿಪ್ರಾಯಪಟ್ಟಿದೆ. ತೀರ್ಪಿಗೆ ಹರ್ಷ ವ್ಯಕ್ತಪಡಿಸಿರುವ ಅರ್ಜಿದಾರೆ ಚಮನ್ ಕೌರ್, ನನ್ನ ತಂದೆಯನ್ನು ಸಿಖ್ ಎನ್ನುವ ಕಾರಣಕ್ಕೆ ಜೀವಂತ ದಹಿಸಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಸಜ್ಜನ್​ ಕುಮಾರ್​ಗೆ ಜೀವಾವಧಿ ಶಿಕ್ಷೆ ನೀಡಿ ಕೋರ್ಟ್ ತೀರ್ಪು ಪ್ರಕಟಿಸಿದೆ. 1984ರ ಅಕ್ಟೋಬರ್​ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್​ಮೆಂಟ್​ ಏರಿಯಾದಲ್ಲಿ ಗಲಭೆ ನಡೆದು ಐವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್​​ ಮುರಳೀಧರ್​ ಹಾಗೂ ನ್ಯಾ. ವಿನೋದ್​ ಗೋಯಲ್​​ ಅವರ ಪೀಠ ಇಂದು ತೀರ್ಪು ಪ್ರಕಟಿಸಿದೆ. ಡಿಸೆಂಬರ್​ 31ರ ಒಳಗೆ ಸಜ್ಜನ್​ ಕುಮಾರ್​​ ಶರಣಾಗಬೇಕಿದೆ.