Featured

2ನೇ ಅಲೆ ಹೋಗಿಲ್ಲ , ನಿರ್ಬಂಧ ಸಡಿಲಿಸುವಾಗ ಎಚ್ಚರ : ರಾಜ್ಯ ಸರಕಾರಕ್ಕೆ ಕೇಂದ್ರ ಸೂಚನೆ -Vishwanews24

2ನೇ ಅಲೆ ಹೋಗಿಲ್ಲ , ನಿರ್ಬಂಧ ಸಡಿಲಿಸುವಾಗ ಎಚ್ಚರ : ರಾಜ್ಯ ಸರಕಾರಕ್ಕೆ ಕೇಂದ್ರ ಸೂಚನೆ -Vishwanews24

ಹೊಸದಿಲ್ಲಿ : ಕೊರೊನಾ 2ನೇ ಅಲೆ ಇನ್ನೂ ಮಾಯವಾಗಿಲ್ಲ. ಹೀಗಾಗಿ ನಿರ್ಬಂಧ ಸಡಿಲಿಸುವಾಗ ಎಚ್ಚರ ಇರಲಿ ಎಂದು ಕೇಂದ್ರ ಸರಕಾರವು ಎಲ್ಲ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ.

ಇನ್ನೂ 71 ಜಿಲ್ಲೆಗಳಲ್ಲಿ ಶೇ. 10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಹೀಗಾಗಿ ರಾಜ್ಯ ಸರಕಾರಗಳು ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಜಾಗ್ರತೆ ವಹಿಸಬೇಕು ಎಂದಿದೆ.

6 ರಾಜ್ಯಗಳಿಗೆ ಕೇಂದ್ರದ ತಂಡ

ಕೊರೊನಾ ಹೆಚ್ಚಿರುವ ಕೇರಳ ಸಹಿತ ಆರು ರಾಜ್ಯಗಳಿಗೆ ಕೇಂದ್ರ ಸರಕಾರ ತನ್ನ ತಜ್ಞರ ತಂಡಗಳನ್ನು ಕಳುಹಿಸಿದೆ. ಇಬ್ಬರು ತಜ್ಞ ವೈದ್ಯರು ಇರುವ ಈ ತಂಡಗಳು ಆಯಾ ರಾಜ್ಯದ ಆರೋಗ್ಯ ಇಲಾಖೆಯ ಅಧಿಕಾರಿಗಳ ಜತೆ ಮಾತುಕತೆ ನಡೆಸಲಿವೆ.

ಕೇಂದ್ರದ ನಿಯಮಾವಳಿ

– ವಾರದ ಸರಾಸರಿಯಲ್ಲಿ ಹೆಚ್ಚು ಪ್ರಕರಣಗಳಿರುವ ಜಿಲ್ಲೆಗಳನ್ನು ಗುರುತಿಸಬೇಕು

– ಹಾಸಿಗೆಯ ಲಭ್ಯತೆ ಮತ್ತು ಆಸ್ಪತ್ರೆಗಳ ಮೂಲಸೌಕರ್ಯದ ಬಗ್ಗೆ ಗಮನ ಇರಲಿ

– ಯಾವ ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳಿವೆ, ಎಲ್ಲಿ ಹಾಸಿಗೆಗಳು ಭರ್ತಿಯಾಗಿವೆ ಎಂಬುದರ ಮೇಲೆ ಗಮನ ಹರಿಸಬೇಕು.

– 14 ದಿನಗಳ ವರೆಗೆ ನಿರ್ಬಂಧಗಳು ಮುಂದುವರಿಯಬೇಕು

– ಹೆಚ್ಚು ಪ್ರಕರಣ ಇರುವ ಜಿಲ್ಲೆಗಳಿಗೆ ಹಿರಿಯ ಅಧಿಕಾರಿಗಳನ್ನು ನೋಡಲ್‌ ಆಗಿ ನೇಮಿಸಬೇಕು

– ಪರೀಕ್ಷೆ-ಪತ್ತೆ- ಚಿಕಿತ್ಸೆ- ಲಸಿಕೆ ನೀಡುವ ಪ್ರಮಾಣ ಹೆಚ್ಚಳ ಮಾಡಬೇಕು.

ಗರ್ಭಿಣಿಯರಿಗೂ ಇನ್ನು ಲಸಿಕೆ

ಇನ್ನು ಗರ್ಭಿಣಿಯರು ಕೂಡ ಕೋವಿನ್‌ ಮೂಲಕ ನೋಂದಣಿ ಮಾಡಿಸಿಕೊಂಡು ಲಸಿಕೆ ಪಡೆಯಬಹುದಾಗಿದೆ. ಜತೆಗೆ ನೇರವಾಗಿ ಲಸಿಕೆ ಕೇಂದ್ರಕ್ಕೂ ತೆರಳಿ ಪಡೆಯಬಹುದು. ಶುಕ್ರವಾರ ಈ ಸಂಬಂಧ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago