ಹೊಸದಿಲ್ಲಿ : ಕೊರೊನಾ 2ನೇ ಅಲೆ ಇನ್ನೂ ಮಾಯವಾಗಿಲ್ಲ. ಹೀಗಾಗಿ ನಿರ್ಬಂಧ ಸಡಿಲಿಸುವಾಗ ಎಚ್ಚರ ಇರಲಿ ಎಂದು ಕೇಂದ್ರ ಸರಕಾರವು ಎಲ್ಲ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ.
ಇನ್ನೂ 71 ಜಿಲ್ಲೆಗಳಲ್ಲಿ ಶೇ. 10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಹೀಗಾಗಿ ರಾಜ್ಯ ಸರಕಾರಗಳು ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಜಾಗ್ರತೆ ವಹಿಸಬೇಕು ಎಂದಿದೆ.
6 ರಾಜ್ಯಗಳಿಗೆ ಕೇಂದ್ರದ ತಂಡ
ಕೊರೊನಾ ಹೆಚ್ಚಿರುವ ಕೇರಳ ಸಹಿತ ಆರು ರಾಜ್ಯಗಳಿಗೆ ಕೇಂದ್ರ ಸರಕಾರ ತನ್ನ ತಜ್ಞರ ತಂಡಗಳನ್ನು ಕಳುಹಿಸಿದೆ. ಇಬ್ಬರು ತಜ್ಞ ವೈದ್ಯರು ಇರುವ ಈ ತಂಡಗಳು ಆಯಾ ರಾಜ್ಯದ ಆರೋಗ್ಯ ಇಲಾಖೆಯ ಅಧಿಕಾರಿಗಳ ಜತೆ ಮಾತುಕತೆ ನಡೆಸಲಿವೆ.
ಕೇಂದ್ರದ ನಿಯಮಾವಳಿ
– ವಾರದ ಸರಾಸರಿಯಲ್ಲಿ ಹೆಚ್ಚು ಪ್ರಕರಣಗಳಿರುವ ಜಿಲ್ಲೆಗಳನ್ನು ಗುರುತಿಸಬೇಕು
– ಹಾಸಿಗೆಯ ಲಭ್ಯತೆ ಮತ್ತು ಆಸ್ಪತ್ರೆಗಳ ಮೂಲಸೌಕರ್ಯದ ಬಗ್ಗೆ ಗಮನ ಇರಲಿ
– ಯಾವ ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳಿವೆ, ಎಲ್ಲಿ ಹಾಸಿಗೆಗಳು ಭರ್ತಿಯಾಗಿವೆ ಎಂಬುದರ ಮೇಲೆ ಗಮನ ಹರಿಸಬೇಕು.
– 14 ದಿನಗಳ ವರೆಗೆ ನಿರ್ಬಂಧಗಳು ಮುಂದುವರಿಯಬೇಕು
– ಹೆಚ್ಚು ಪ್ರಕರಣ ಇರುವ ಜಿಲ್ಲೆಗಳಿಗೆ ಹಿರಿಯ ಅಧಿಕಾರಿಗಳನ್ನು ನೋಡಲ್ ಆಗಿ ನೇಮಿಸಬೇಕು
– ಪರೀಕ್ಷೆ-ಪತ್ತೆ- ಚಿಕಿತ್ಸೆ- ಲಸಿಕೆ ನೀಡುವ ಪ್ರಮಾಣ ಹೆಚ್ಚಳ ಮಾಡಬೇಕು.
ಗರ್ಭಿಣಿಯರಿಗೂ ಇನ್ನು ಲಸಿಕೆ
ಇನ್ನು ಗರ್ಭಿಣಿಯರು ಕೂಡ ಕೋವಿನ್ ಮೂಲಕ ನೋಂದಣಿ ಮಾಡಿಸಿಕೊಂಡು ಲಸಿಕೆ ಪಡೆಯಬಹುದಾಗಿದೆ. ಜತೆಗೆ ನೇರವಾಗಿ ಲಸಿಕೆ ಕೇಂದ್ರಕ್ಕೂ ತೆರಳಿ ಪಡೆಯಬಹುದು. ಶುಕ್ರವಾರ ಈ ಸಂಬಂಧ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…