Featured

2ನೇ ಏಕದಿನ ಪಂದ್ಯಾಟ: ಕಿವೀಸ್ ವಿರುದ್ಧ ಭಾರತ ತಂಡಕ್ಕೆ 90 ರನ್ ಗಳ ಭರ್ಜರಿ ಗೆಲುವು – Vishwanews24

ನೇಪಿಯರ್: ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದು, ವಿಲಿಯಮ್ಸನ್ ಪಡೆ ವಿರುದ್ಧ ಭರ್ಜರಿ 90 ರನ್ ಗಳ ಜಯ ದಾಖಲಿಸಿದೆ.
ನೇಪಿಯರ್ ನಲ್ಲಿ ಇಂದು ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 325 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ತಂಡ ಕೇವಲ 234 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೊಹ್ಲಿ ಪಡೆ ಎದುರು 90 ರನ್ ಗಳ ಅಂತರದಲ್ಲಿ ಮಂಡಿಯೂರಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಮೊದಲ ವಿಕೆಟ್ ಗೆ 154 ರನ್ ಜೊತೆಯಾಟ ನಡೆಸಿದರು. ರೋಹಿತ್ ಶರ್ಮಾ 87 ರನ್, ಶಿಖರ್ ಧವನ್ 66 ರನ್, ನಾಯಕ ವಿರಾಟ್ ಕೊಹ್ಲಿ 43, ಮಹೇಂದ್ರ ಸಿಂಗ್ ಧೋನಿ 47 ಹಾಗೂ ಕೇದಾರ್ ಜಾಧವ್ 22 ರನ್ ಗಳಿಸಿ ತಂಡದ ಮೊತ್ತವನ್ನು 324ಕ್ಕೇರಿಸಿದರು. ಕಿವೀಸ್ ಉತ್ತಮ ಆರಂಭ ಪಡೆಯಿತಾದರೂ ಮಧ್ಯಮ ಕ್ರಮಾಂಕ ವಿಫಲವಾಯಿತು. ಭಾರತದ ಪರ ಕುಲದೀಪ್ ಯಾದವ್ 4 ವಿಕೆಟ್ ಗಳಿಸಿರು.
ಪ್ರಮುಖವಾಗಿ ಭಾರತದ ಕುಲದೀಪ್ ಯಾದವ್ ಅವರ ಮಾರಕ ಬೌಲಿಂಗ್ ದಾಳಿಗೆ ಕಿವೀಸ್ ಪಡೆ ಅಕ್ಷರಶಃ ಪತರುಗುಟ್ಟಿತ್ತು. ಮಧ್ಯಮ ಕ್ರಮಾಂಕದಲ್ಲಿ ಬ್ರೇಸ್ ವೆಲ್ ಅರ್ಧಶತಕ ಸಿಡಿಸಿ ಪ್ರತಿರೋಧ ತೋರಿದರಾದರೂ ಅವರಿಗೆ ತಂಡದ ಇತರೆ ಆಟಗಾರರಿಂದ ಉತ್ತಮ ಸಾಥ್ ದೊರೆಯಲಿಲ್ಲ. ಪರಿಣಾಮ ನ್ಯೂಜಿಲೆಂಡ್ ತಂಡ 40.2 ಓವರ್ ಗಳಲ್ಲಿ ಕೇವಲ 234 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.
ಆ ಮೂಲಕ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ ಭಾರತ 2-0 ಅಂತರದ ಮುನ್ನಡೆ ಸಾಧಿಸಿದ್ದು, ಉಳಿದಿರುವ ಮೂರು ಪಂದ್ಯಗಳಲ್ಲಿ ಒಂದನ್ನು ಗೆದ್ದರೂ ಸರಣಿ ಭಾರತದ ಕೈವಶವಾಗಲಿದೆ.
Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

41 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

50 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago