Featured

2ನೇ ಏಕದಿನ ಪಂದ್ಯಾಟ: ಕಿವೀಸ್ ವಿರುದ್ಧ ಭಾರತ ತಂಡಕ್ಕೆ 90 ರನ್ ಗಳ ಭರ್ಜರಿ ಗೆಲುವು – Vishwanews24

ನೇಪಿಯರ್: ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದು, ವಿಲಿಯಮ್ಸನ್ ಪಡೆ ವಿರುದ್ಧ ಭರ್ಜರಿ 90 ರನ್ ಗಳ ಜಯ ದಾಖಲಿಸಿದೆ.
ನೇಪಿಯರ್ ನಲ್ಲಿ ಇಂದು ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 325 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ತಂಡ ಕೇವಲ 234 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೊಹ್ಲಿ ಪಡೆ ಎದುರು 90 ರನ್ ಗಳ ಅಂತರದಲ್ಲಿ ಮಂಡಿಯೂರಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಮೊದಲ ವಿಕೆಟ್ ಗೆ 154 ರನ್ ಜೊತೆಯಾಟ ನಡೆಸಿದರು. ರೋಹಿತ್ ಶರ್ಮಾ 87 ರನ್, ಶಿಖರ್ ಧವನ್ 66 ರನ್, ನಾಯಕ ವಿರಾಟ್ ಕೊಹ್ಲಿ 43, ಮಹೇಂದ್ರ ಸಿಂಗ್ ಧೋನಿ 47 ಹಾಗೂ ಕೇದಾರ್ ಜಾಧವ್ 22 ರನ್ ಗಳಿಸಿ ತಂಡದ ಮೊತ್ತವನ್ನು 324ಕ್ಕೇರಿಸಿದರು. ಕಿವೀಸ್ ಉತ್ತಮ ಆರಂಭ ಪಡೆಯಿತಾದರೂ ಮಧ್ಯಮ ಕ್ರಮಾಂಕ ವಿಫಲವಾಯಿತು. ಭಾರತದ ಪರ ಕುಲದೀಪ್ ಯಾದವ್ 4 ವಿಕೆಟ್ ಗಳಿಸಿರು.
ಪ್ರಮುಖವಾಗಿ ಭಾರತದ ಕುಲದೀಪ್ ಯಾದವ್ ಅವರ ಮಾರಕ ಬೌಲಿಂಗ್ ದಾಳಿಗೆ ಕಿವೀಸ್ ಪಡೆ ಅಕ್ಷರಶಃ ಪತರುಗುಟ್ಟಿತ್ತು. ಮಧ್ಯಮ ಕ್ರಮಾಂಕದಲ್ಲಿ ಬ್ರೇಸ್ ವೆಲ್ ಅರ್ಧಶತಕ ಸಿಡಿಸಿ ಪ್ರತಿರೋಧ ತೋರಿದರಾದರೂ ಅವರಿಗೆ ತಂಡದ ಇತರೆ ಆಟಗಾರರಿಂದ ಉತ್ತಮ ಸಾಥ್ ದೊರೆಯಲಿಲ್ಲ. ಪರಿಣಾಮ ನ್ಯೂಜಿಲೆಂಡ್ ತಂಡ 40.2 ಓವರ್ ಗಳಲ್ಲಿ ಕೇವಲ 234 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.
ಆ ಮೂಲಕ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ ಭಾರತ 2-0 ಅಂತರದ ಮುನ್ನಡೆ ಸಾಧಿಸಿದ್ದು, ಉಳಿದಿರುವ ಮೂರು ಪಂದ್ಯಗಳಲ್ಲಿ ಒಂದನ್ನು ಗೆದ್ದರೂ ಸರಣಿ ಭಾರತದ ಕೈವಶವಾಗಲಿದೆ.
Vishwa News 24

Recent Posts

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

3 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 hours ago

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

5 hours ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

5 hours ago