ಮುಂಬೈ : ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ಖಾಸಗಿ ವಿಮಾನ ಎರಡನೇ ಬಾರಿ ರನ್ವೇನಲ್ಲಿ ಲ್ಯಾಂಡ್ ಆಗಲು ಪ್ರಯತ್ನಿಸುತ್ತಿದ್ದ ವೇಳೆ ಪತನಗೊಂಡಿದೆ.
ಫ್ಲೈಟ್ರಾಡರ್ನ ದತ್ತಾಂಶದ ಪ್ರಕಾರ ಬಾಂಬಾರ್ಡಿಯರ್ ಲಿಯರ್ಜೆಟ್ 45 (ವಿಟಿ-ಎಸ್ಎಸ್ಕೆ) ಮುಂಬೈ ವಿಮಾನ ನಿಲ್ದಾಣದಿಂದ ಬೆಳಗ್ಗೆ 8:10ಕ್ಕೆ ಟೇಕಾಫ್ ಆಗಿತ್ತು.ಅರಬ್ಬಿ ಸಮದ್ರದ ಮೇಲೆ ಹಾರಿ 8:30ಕ್ಕೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲು ಪೈಲಟ್ ಪ್ರಯತ್ನಿಸಿದ್ದಾರೆ.
ಮೊದಲ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ ಎರಡನೇ ಬಾರಿ ವಿಮಾನ ಲ್ಯಾಂಡಿಂಗ್ ಮಾಡಲು ಮುಂದಾಗಿದ್ದಾರೆ. ಬೆಳಗ್ಗೆ 8:42 ರ ಸುಮಾರಿಗೆ ಎರಡನೇ ಬಾರಿಗೆ ಇಳಿಸಲು ಪ್ರಯತ್ನಿಸಿದ್ದಾರೆ. ಆದರೆ ಈ ಪ್ರಯತ್ನ ವಿಫಲವಾಗಿ ವಿಮಾನ ಪತನಗೊಂಡಿದೆ.
16 ವರ್ಷ ಹಳೆಯದಾದ ವಿಮಾದಲ್ಲಿ ಯಾವುದೇ ತಾಂತ್ರಿಕ ದೋಷ ಇರಲಿಲ್ಲ. ಕಳಪೆ ಗೋಚರತೆಯಿಂದ ವಿಮಾನ ಪತನಗೊಂಡಿದೆ ಎಂದು ವಿಮಾನ ನಿರ್ವಾಹಕ ಕಂಪನಿ ವಿಎಸ್ಆರ್ ವೆಂಚರ್ಸ್ ಹೇಳಿದೆ. ವಿಮಾನ ರನ್ವೇ ಬಳಿಯೇ ಹಾರುತ್ತಿತ್ತು.ರನ್ವೇ ಸಮೀಪಿಸಲು ಇನ್ನೇನು 100 ಅಡಿ ಇದ್ದಾಗ ಪತನಗೊಂಡು ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.
ವಿಮಾನ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಳ್ಳುವುದನ್ನು ನೋಡಿದ ಕೂಡಲೇ ನಾವು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ಹೊರಗೆ ತೆಗೆಯಲು ಪ್ರಯತ್ನಪಟ್ಟೆವು. ಆದರೆ ಬೆಂಕಿಯ ಜ್ವಾಲೆಯಿಂದ ಅವರಿಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…