Featured

2ನೇ ಶನಿವಾರ ಬದಲು ಅ.20ಕ್ಕೆ ರಜೆ ಘೋಷಣೆ ಸಾಧ್ಯತೆ

ಬೆಂಗಳೂರು: ಪ್ರಸಕ್ತ ತಿಂಗಳ ಎರಡನೇ ಶನಿವಾರದ ಬದಲಿಗೆ ಅ.20 ರಂದು ರಜೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

ಅಕ್ಟೋಬರ್ 18 ಮತ್ತು 19 ರಂದು ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬ ಬರಲಿದ್ದು, ಅಕ್ಟೋಬರ್ 21 ರಂದು ಭಾನುವಾರ ಬರಲಿದೆ. ಅಕ್ಟೋಬರ್ 20 ಶನಿವಾರ ದಿನದಂದು ರಜೆ ತೆಗೆದುಕೊಂಡರೆ, ನಾಲ್ಕು ದಿನಗಳ ಸುಧೀರ್ಘ ರಜೆ ಸಿಗುವುದೆಂದು ಹೆಚ್ಚು ಮಂದಿ ರಜೆ ತೆಗೆದುಕೊಳ್ಳುವ ಸಾಧ್ಯತೆಗಳಿರುವುದರಿಂದ ಅಕ್ಟೋಬರ್ 13 ಎರಡನೇ ಶನಿವಾರವಾಗಿದ್ದು, ಅಂದು ರಜೆಯನ್ನು ರದ್ದು ಮಾಡಿ, ಅಕ್ಟೋಬರ್ 20 ರಂದೇ ರಜೆ ನೀಡಲು ಸಿಎಂ ಕುಮಾರಸ್ವಾಮಿಯವರು ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ಪ್ರಸಕ್ತ ತಿಂಗಳು ಒಟ್ಟು 31 ದಿನಗಳಿದ್ದು, ಇದರಲ್ಲಿ 10 ದಿನಗಳು ಸರ್ಕಾರಿ ಉದ್ಯೋಗಸ್ಥರಿಗೆ ರಜಾ ದಿನಗಳಿವೆ. 4 ಭಾನುವಾರ, ಗಾಂಧಿ ಜಯಂತಿ, ಮಹಾಲಯ ಅಮಾವಾಸ್ಯೆ (ಅ.8), ಎರಡನೇ ಶನಿವಾರ, ಆಯುಧ ಪೂಜೆ-ವಿಜಯದಶಮಿ (ಅ.18, 19) ಮತ್ತು ವಾಲ್ಮೀಕಿ ಜಯಂತಿ (ಅ.24).

ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಸ್ಥರ ಸಂಘದ ಕಾರ್ಯದರ್ಶಿ ಶ್ರೀಕಾಂತ್ ಮಾತನಾಡಿ, ಕೇವಲ ಪ್ರಸಕ್ತ ತಿಂಗಳು ಮಾತ್ರ ಎರಡನೇ ಶನಿವಾರದ ಬದಲಿಗೆ ಮೂರನೇ ಶನಿವಾರ ರಜೆ ನೀಡಲು ಸರ್ಕಾರ ನಿರ್ಧರಿಸಿದ್ದೇ ಆದರೆ, ಅದಕ್ಕೆ ನಾವು ಸಹಕಾರ ನೀಡುತ್ತೇವೆ. ಆಡಳಿತದ ಉದ್ದೇಶವಾಗಿದ್ದರೆ, ಅದು ಸಾರ್ವಜನಿಕರಿಗೆ ಸಹಾಯವಾಗಲಿದೆ. ಎರಡನೇ ಶನಿವಾರ ಕೆಲಸ ಮಾಡಿ, ಅ.20 ರಂದು ರಜೆ ತೆಗೆದುಕೊಳ್ಳಲು ಸಿದ್ಧರಿದ್ದೇವೆಂದು ಹೇಳಿದ್ದಾರೆ.

ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 1986ರಲ್ಲಿ ಸರ್ಕಾರಿ ನೌಕರರಿಗೆ ಎರಡನೇ ಶನಿವಾರ ರಜೆ ನೀಡುವ ಪದ್ಧತಿ ಆರಂಭವಾಗಿತ್ತು. ಒಂದು ವೇಳೆ ಎರಡನೇ ಶನಿವಾರದಂದು ರಜೆ ನೀಡುವುದನ್ನು ನಿಲ್ಲಿಸಿದ್ದರೆ, ಕುಮಾರಸ್ವಾಮಿಯವರು ಈ ಸಂಪ್ರದಾಯವನ್ನು ಮುರಿದ ಮೊದಲ ಮುಖ್ಯಮಂತ್ರಿಯಾಗುತ್ತಿದ್ದರು.

ಕೆಲ ದಿನಗಳ ಹಿಂದಷ್ಟೇ ಸಚಿವ ಪ್ರಿಯಾಂಕ ಖರ್ಗೆಯವರು ಸರ್ಕಾರಿ ನೌಕರರಿಗೆ 5 ದಿನಗಳ ಕೆಲಸದ ವಾರ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಇದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಖರ್ಗೆಯವರು ಶಿಫಾರಸ್ಸನ್ನು ಸರ್ಕಾರಿ ನೌಕರರ ಸಂಘಟನೆಯ ಸದಸ್ಯರು ಸ್ವಾಗತಿಸಿದ್ದಾರೆ. ಈ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಜಯಂತಿಗಳಿಗೆ ಸಾಕಷ್ಟು ರಜೆಗಳನ್ನು ನೀಡಲಾಗುತ್ತದೆ. ಇದರ ಅಗತ್ಯವಿಲ್ಲ. ಇಂತಹ ರಜೆಗಳನ್ನು ರದ್ದು ಮಾಡಿ, ಶನಿವಾರ ಹಾಗೂ ಭಾನುವಾರ ರಜೆ ನೀಡಿ, ಕೆಲಸದ ಅವಧಿಯನ್ನು ವಿಸ್ತರಿಸಿದರೆ, ನಮಗೆ ಸಮಸ್ಯೆಗಳಿಲ್ಲ. ಆದರೆ, ಜಾತಿ ಮೇಲೆ ಅವಲಂಬಿತರಾಗಿರುವ ಕೆಲ ರಾಜಕೀಯ ನಾಯಕರು ಜಯಂತಿಗಳಿಗಿರುವ ರಜೆಗಳನ್ನು ರದ್ದು ಮಾಡಲು ಒಪ್ಪುತ್ತಿಲ್ಲ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

19 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

21 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

22 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

22 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

22 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

22 hours ago