Featured

2ನೇ ಶನಿವಾರ ಬದಲು ಅ.20ಕ್ಕೆ ರಜೆ ಘೋಷಣೆ ಸಾಧ್ಯತೆ

ಬೆಂಗಳೂರು: ಪ್ರಸಕ್ತ ತಿಂಗಳ ಎರಡನೇ ಶನಿವಾರದ ಬದಲಿಗೆ ಅ.20 ರಂದು ರಜೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

ಅಕ್ಟೋಬರ್ 18 ಮತ್ತು 19 ರಂದು ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬ ಬರಲಿದ್ದು, ಅಕ್ಟೋಬರ್ 21 ರಂದು ಭಾನುವಾರ ಬರಲಿದೆ. ಅಕ್ಟೋಬರ್ 20 ಶನಿವಾರ ದಿನದಂದು ರಜೆ ತೆಗೆದುಕೊಂಡರೆ, ನಾಲ್ಕು ದಿನಗಳ ಸುಧೀರ್ಘ ರಜೆ ಸಿಗುವುದೆಂದು ಹೆಚ್ಚು ಮಂದಿ ರಜೆ ತೆಗೆದುಕೊಳ್ಳುವ ಸಾಧ್ಯತೆಗಳಿರುವುದರಿಂದ ಅಕ್ಟೋಬರ್ 13 ಎರಡನೇ ಶನಿವಾರವಾಗಿದ್ದು, ಅಂದು ರಜೆಯನ್ನು ರದ್ದು ಮಾಡಿ, ಅಕ್ಟೋಬರ್ 20 ರಂದೇ ರಜೆ ನೀಡಲು ಸಿಎಂ ಕುಮಾರಸ್ವಾಮಿಯವರು ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ಪ್ರಸಕ್ತ ತಿಂಗಳು ಒಟ್ಟು 31 ದಿನಗಳಿದ್ದು, ಇದರಲ್ಲಿ 10 ದಿನಗಳು ಸರ್ಕಾರಿ ಉದ್ಯೋಗಸ್ಥರಿಗೆ ರಜಾ ದಿನಗಳಿವೆ. 4 ಭಾನುವಾರ, ಗಾಂಧಿ ಜಯಂತಿ, ಮಹಾಲಯ ಅಮಾವಾಸ್ಯೆ (ಅ.8), ಎರಡನೇ ಶನಿವಾರ, ಆಯುಧ ಪೂಜೆ-ವಿಜಯದಶಮಿ (ಅ.18, 19) ಮತ್ತು ವಾಲ್ಮೀಕಿ ಜಯಂತಿ (ಅ.24).

ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಸ್ಥರ ಸಂಘದ ಕಾರ್ಯದರ್ಶಿ ಶ್ರೀಕಾಂತ್ ಮಾತನಾಡಿ, ಕೇವಲ ಪ್ರಸಕ್ತ ತಿಂಗಳು ಮಾತ್ರ ಎರಡನೇ ಶನಿವಾರದ ಬದಲಿಗೆ ಮೂರನೇ ಶನಿವಾರ ರಜೆ ನೀಡಲು ಸರ್ಕಾರ ನಿರ್ಧರಿಸಿದ್ದೇ ಆದರೆ, ಅದಕ್ಕೆ ನಾವು ಸಹಕಾರ ನೀಡುತ್ತೇವೆ. ಆಡಳಿತದ ಉದ್ದೇಶವಾಗಿದ್ದರೆ, ಅದು ಸಾರ್ವಜನಿಕರಿಗೆ ಸಹಾಯವಾಗಲಿದೆ. ಎರಡನೇ ಶನಿವಾರ ಕೆಲಸ ಮಾಡಿ, ಅ.20 ರಂದು ರಜೆ ತೆಗೆದುಕೊಳ್ಳಲು ಸಿದ್ಧರಿದ್ದೇವೆಂದು ಹೇಳಿದ್ದಾರೆ.

ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 1986ರಲ್ಲಿ ಸರ್ಕಾರಿ ನೌಕರರಿಗೆ ಎರಡನೇ ಶನಿವಾರ ರಜೆ ನೀಡುವ ಪದ್ಧತಿ ಆರಂಭವಾಗಿತ್ತು. ಒಂದು ವೇಳೆ ಎರಡನೇ ಶನಿವಾರದಂದು ರಜೆ ನೀಡುವುದನ್ನು ನಿಲ್ಲಿಸಿದ್ದರೆ, ಕುಮಾರಸ್ವಾಮಿಯವರು ಈ ಸಂಪ್ರದಾಯವನ್ನು ಮುರಿದ ಮೊದಲ ಮುಖ್ಯಮಂತ್ರಿಯಾಗುತ್ತಿದ್ದರು.

ಕೆಲ ದಿನಗಳ ಹಿಂದಷ್ಟೇ ಸಚಿವ ಪ್ರಿಯಾಂಕ ಖರ್ಗೆಯವರು ಸರ್ಕಾರಿ ನೌಕರರಿಗೆ 5 ದಿನಗಳ ಕೆಲಸದ ವಾರ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಇದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಖರ್ಗೆಯವರು ಶಿಫಾರಸ್ಸನ್ನು ಸರ್ಕಾರಿ ನೌಕರರ ಸಂಘಟನೆಯ ಸದಸ್ಯರು ಸ್ವಾಗತಿಸಿದ್ದಾರೆ. ಈ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಜಯಂತಿಗಳಿಗೆ ಸಾಕಷ್ಟು ರಜೆಗಳನ್ನು ನೀಡಲಾಗುತ್ತದೆ. ಇದರ ಅಗತ್ಯವಿಲ್ಲ. ಇಂತಹ ರಜೆಗಳನ್ನು ರದ್ದು ಮಾಡಿ, ಶನಿವಾರ ಹಾಗೂ ಭಾನುವಾರ ರಜೆ ನೀಡಿ, ಕೆಲಸದ ಅವಧಿಯನ್ನು ವಿಸ್ತರಿಸಿದರೆ, ನಮಗೆ ಸಮಸ್ಯೆಗಳಿಲ್ಲ. ಆದರೆ, ಜಾತಿ ಮೇಲೆ ಅವಲಂಬಿತರಾಗಿರುವ ಕೆಲ ರಾಜಕೀಯ ನಾಯಕರು ಜಯಂತಿಗಳಿಗಿರುವ ರಜೆಗಳನ್ನು ರದ್ದು ಮಾಡಲು ಒಪ್ಪುತ್ತಿಲ್ಲ ಎಂದು ತಿಳಿಸಿದ್ದಾರೆ.

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

3 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

3 hours ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

3 hours ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

3 hours ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

3 hours ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

5 hours ago