ಬೆಂಗಳೂರು: 384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಭಾಷಾಂತರದ ಎಡವಟ್ಟು ವ್ಯಾಪಕ ಟೀಕೆ ಹಾಗೂ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಮರು ಪರೀಕ್ಷೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಎಸ್ ಸಿಗೆ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಂತ್ರಿ, ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಯಲ್ಲಿ ಅಸಮರ್ಪಕ ಕನ್ನಡ ಅನುವಾದದ ಪ್ರಶ್ನೆಗಳ ವರದಿಯ ಹಿನ್ನೆಲೆಯಲ್ಲಿ, ಎಲ್ಲಾ ಅಭ್ಯರ್ಥಿಗಳಿಗೆ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್ ಎಸ್ ಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಈ ಲೋಪಗಳಿಗೆ ಕಾರಣರಾದವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ಮುಂಬರುವ ಪರೀಕ್ಷೆಯನ್ನು ಅತ್ಯಂತ ಜವಾಬ್ದಾರಿ ಮತ್ತು ಹೊಣೆಗಾರಿಕೆಯೊಂದಿಗೆ ನಡೆಸಲಾಗುವುದು. ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆಯನ್ನು ಎತ್ತಿಹಿಡಿಯಲು ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…