ಉಡುಪಿ /ದಕ್ಷಿಣ ಕನ್ನಡ :ಹತ್ತು ಕಾರ್ಮಿಕ ಒಕ್ಕೂಟಗಳು ಕೇಂದ್ರ ಸರಕಾರದ ವಿರುದ್ಧ ನೀಡಿರುವ ೨ ದಿನಗಳ ಭಾರತ್ ಬಂದ್ಗೆ ಕರೆ ದ.ಕ ಜಿಲ್ಲೆಯಲ್ಲಿ 2ನೇ ದಿನ ನೀರಸ ಪ್ರಕ್ರಿಯೆ ವ್ಯಕ್ತವಾಗಿದೆ.
ಮೊದಲ ದಿನ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಬುಧವಾರವೂ ಬಂದ್ ಗೆ ಕರೆ ನೀಡಲಾಗಿದ್ದರೂ ದ.ಕ ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಿಲ್ಲ. ಈ ಹಿನ್ನಲೆಯಲ್ಲಿ ಎಂದಿನಂತೆ ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿಗಳುತೆರಳುತ್ತಿದ್ದಾರೆ.
ಕರಾವಳಿಯ ಲೈಫ್ ಲೈನ್ ಎಂದೇ ಕರೆಯಲಾಗುವ ಖಾಸಗಿ ಎಕ್ಸ್ಪ್ರೆಸ್, ಸರ್ವಿಸ್ ಹಾಗೂ ಸಿಟಿ ಬಸ್ ಗಳು ಇಂದು ಮುಂಜಾನೆಯಿಂದ ಎಂದಿನಂತೆ ಸಂಚಾರ ಆರಂಭಿಸಿವೆ. ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಬಸ್ ಮಾಲೀಕರ ಸಂಘ ಬೆಂಬಲ ನೀಡಿರಲಿಲ್ಲ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಶಾಲಾ, ಕಾಲೇಜುಗಳು ಎಂದಿನಂತೆ ಆರಂಭವಾಗಿವೆ. ವಾಹನ ಸಂಚಾರಎಂದಿನಂತೆ ಆರಂಭಗೊಂಡಿದೆ. ಖಾಸಗಿ ಬಸ್ ಗಳು ಹಾಗೂ ಕೆ ಎಸ್ ಆರ್ ಟಿಸಿ ಬಸ್ ಗಳು ರಸ್ತೆಗಿಳಿದಿದ್ದು, ಆಟೋ ರಿಕ್ಷಗಳು ಎಂದಿನಂತೆ ಸಂಚಾರ ಆರಂಭಿಸಿದೆ.ಅಂಗಡಿ, ಮಳಿಗೆ, ಮುಂಗಟ್ಟುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಬ್ಯಾಂಕ್ ಸಿಬ್ಬಂದಿ ಮುಷ್ಕರಕ್ಕೆ ಬೆಂಬಲ ಸೂಚಿಸಿರುವುದರಿಂದ ಸೇವೆ ಭಾಗಶಃ ವ್ಯತ್ಯಯಗೊಂಡಿದೆ. ಮಾಲ್ ಗಳು, ಚಿತ್ರಮಂದಿರಗಳು,ಪೆಟ್ರೋಲ್ ಬಂಕ್ ಗಳು, ಮೆಡಿಕಲ್ ಶಾಪ್ ಸಹಿತ ಅಗತ್ಯ ವಸ್ತು, ಸೇವೆ ಸಾಮಾನ್ಯವಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…