ಉಡುಪಿ /ದಕ್ಷಿಣ ಕನ್ನಡ :ಹತ್ತು ಕಾರ್ಮಿಕ ಒಕ್ಕೂಟಗಳು ಕೇಂದ್ರ ಸರಕಾರದ ವಿರುದ್ಧ ನೀಡಿರುವ ೨ ದಿನಗಳ ಭಾರತ್ ಬಂದ್ಗೆ ಕರೆ ದ.ಕ ಜಿಲ್ಲೆಯಲ್ಲಿ 2ನೇ ದಿನ ನೀರಸ ಪ್ರಕ್ರಿಯೆ ವ್ಯಕ್ತವಾಗಿದೆ.
ಮೊದಲ ದಿನ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಬುಧವಾರವೂ ಬಂದ್ ಗೆ ಕರೆ ನೀಡಲಾಗಿದ್ದರೂ ದ.ಕ ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಿಲ್ಲ. ಈ ಹಿನ್ನಲೆಯಲ್ಲಿ ಎಂದಿನಂತೆ ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿಗಳುತೆರಳುತ್ತಿದ್ದಾರೆ.
ಕರಾವಳಿಯ ಲೈಫ್ ಲೈನ್ ಎಂದೇ ಕರೆಯಲಾಗುವ ಖಾಸಗಿ ಎಕ್ಸ್ಪ್ರೆಸ್, ಸರ್ವಿಸ್ ಹಾಗೂ ಸಿಟಿ ಬಸ್ ಗಳು ಇಂದು ಮುಂಜಾನೆಯಿಂದ ಎಂದಿನಂತೆ ಸಂಚಾರ ಆರಂಭಿಸಿವೆ. ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಬಸ್ ಮಾಲೀಕರ ಸಂಘ ಬೆಂಬಲ ನೀಡಿರಲಿಲ್ಲ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಶಾಲಾ, ಕಾಲೇಜುಗಳು ಎಂದಿನಂತೆ ಆರಂಭವಾಗಿವೆ. ವಾಹನ ಸಂಚಾರಎಂದಿನಂತೆ ಆರಂಭಗೊಂಡಿದೆ. ಖಾಸಗಿ ಬಸ್ ಗಳು ಹಾಗೂ ಕೆ ಎಸ್ ಆರ್ ಟಿಸಿ ಬಸ್ ಗಳು ರಸ್ತೆಗಿಳಿದಿದ್ದು, ಆಟೋ ರಿಕ್ಷಗಳು ಎಂದಿನಂತೆ ಸಂಚಾರ ಆರಂಭಿಸಿದೆ.ಅಂಗಡಿ, ಮಳಿಗೆ, ಮುಂಗಟ್ಟುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಬ್ಯಾಂಕ್ ಸಿಬ್ಬಂದಿ ಮುಷ್ಕರಕ್ಕೆ ಬೆಂಬಲ ಸೂಚಿಸಿರುವುದರಿಂದ ಸೇವೆ ಭಾಗಶಃ ವ್ಯತ್ಯಯಗೊಂಡಿದೆ. ಮಾಲ್ ಗಳು, ಚಿತ್ರಮಂದಿರಗಳು,ಪೆಟ್ರೋಲ್ ಬಂಕ್ ಗಳು, ಮೆಡಿಕಲ್ ಶಾಪ್ ಸಹಿತ ಅಗತ್ಯ ವಸ್ತು, ಸೇವೆ ಸಾಮಾನ್ಯವಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…