Featured

2 ಲಕ್ಷ ರೂ.ವರೆಗಿನ ರೈತರ ಸಾಲಮನ್ನಾ ಘೋಷಣೆ

ಬೆಂಗಳೂರು: ಬಹುನಿರೀಕ್ಷಿತ ರೈತರ ಸಾಲಮನ್ನಾ ಘೋಷಣೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್​ ಅಧಿವೇಶನದಲ್ಲಿ ಗುರುವಾರ ಪ್ರಕಟಿಸಿದ್ದು, 2 ಲಕ್ಷ ರೂ. ವರೆಗಿನ ಸಾಲವನ್ನು ಮನ್ನಾ ಮಾಡಿದ್ದಾರೆ. ಈ ಕ್ರಮದಿಂದಾಗಿ ಸರಕಾರಕ್ಕೆ 34 ಸಾವಿರ ಕೋಟಿ ರೂ. ಹೊರೆಯಾಗಲಿದೆ.

ಮೈತ್ರಿ ಸರ್ಕಾರ ರಚನೆಯಾದಂದಿನಿಂದ ಜೆಡಿಎಸ್‌ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕೆಂಬ ಕೂಗು ಕೇಳಿಬಂದಿತ್ತು. ಇದರ ಹಿನ್ನೆಲೆಯಲ್ಲಿಯೇ ಮುಖ್ಯಮಂತ್ರಿ ತಮ್ಮ ಮೊದಲ ಬಜೆಟ್‌ನಲ್ಲಿ ಸಾಲಮನ್ನಾ ಘೋಷಣೆ ಮಾಡಿದ್ದಾರೆ.

ಮೊದಲ ಹಂತದಲ್ಲಿ ರಾಷ್ಟ್ರೀಯ ಮತ್ತು ಸಹಕಾರ ಬ್ಯಾಂಕುಗಳ ಸುಸ್ತಿ ಬೆಳೆ ಸಾಲಮನ್ನಾ ಘೋಷಣೆ ಮಾಡಿದ್ದು, ಡಿಸೆಂಬರ್‌ವರೆಗಿನ ರೈತರ ಸುಸ್ತಿ ಬೆಳೆ ಸಾಲಮನ್ನಾ ಮಾಡಲು ತೀರ್ಮಾನಿಸಿದೆ. ಸಕಾಲದಲ್ಲಿ ಸಾಲ ಮರುಪಾವತಿ ಮಾಡಿರುವ, ಸುಸ್ತಿದಾರರಲ್ಲದ ರೈತರ ಸಾಲದ ಖಾತೆಗಳಿಗೆ 25 ಸಾವಿರ ತುಂಬಲು ನಿರ್ಧರಿಸಲಾಗಿದೆ.

ಈ ಬೆಳೆ ಸಾಲ ಮನ್ನಾ ಯೋಜನೆಯಿಂದ ಸುಮಾರು 34,000 ಕೋಟಿ ರೂ. ಗಳ ಮೊತ್ತದ ಪ್ರಯೋಜನ ರೈತರಿಗೆ ದೊರೆಯಲಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಸಹಕಾರಿ ಕ್ಷೇತ್ರದ ಅಧಿಕಾರಿಗಳ ಕುಟುಂಬಗಳು ಹಾಗೂ ಕಳೆದ 3 ವರ್ಷಗಳಲ್ಲಿ ಆದಾಯ ತೆರಿಗೆ ಕಟ್ಟಿರುವಂತಹ ರೈತರುಗಳು ಹಾಗೂ ಇತರೆ ಅನರ್ಹ ಕೃಷಿ ಸಾಲಗಾರರು ಈ ಸಾಲ ಮನ್ನಾ ಯೋಜನೆಯಿಂದ ಹೊರಗೆ ಇರಲಿದ್ದಾರೆ.

ರೈತರಿಗೆ ಹೊಸ ಸಾಲ ಪಡೆಯಲು ಅನುಕೂಲವಾಗುವಂತೆ ಸರ್ಕಾರವು ಅವರ ಸುಸ್ತಿ ಖಾತೆಯಲ್ಲಿರುವ ಬಾಕಿಯನ್ನು ಮನ್ನಾ ಮಾಡಿ ಋಣಮುಕ್ತ ಪತ್ರವನ್ನು ನೀಡಲು ಕ್ರಮ ಕೈಗೊಳ್ಳಲಿದೆ. ಈ ಉದ್ದೇಶಕ್ಕಾಗಿ 2018-19ರ ಆಯವ್ಯಯದಲ್ಲಿ 6,500 ಕೋಟಿ ರೂ. ನಿಗದಿಪಡಿಸಿರುತ್ತೇನೆ. ಇದಲ್ಲದೆ ಹಿಂದಿನ ಸರ್ಕಾರವು ಸಹಕಾರಿ ಬ್ಯಾಂಕ್ ಗಳಲ್ಲಿ ರೈತರು ಮಾಡಿದ ಸುಮಾರು 8,165 ಕೋಟಿ ರೂ. ಸಾಲ ಮನ್ನಾ ಮಾಡಿ ಅದರಲ್ಲಿ 4,165 ಕೋಟಿ ರೂ.ಗಳನ್ನು ಹಿಂದಿನ ವರ್ಷ ಬಿಡುಗಡೆ ಮಾಡಿದೆ. ಉಳಿದ 4,000 ಕೋಟಿ ರು.ಗಳನ್ನು ಸಹ ಪಾವತಿ ಮಾಡಲು ಈ ಆಯವ್ಯಯದಲ್ಲಿ ಅವಕಾಶ ಕಲ್ಪಿಸಲಾಗಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

7 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

7 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

8 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

9 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

10 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

10 hours ago