ಬೆಂಗಳೂರು: ಬಹುನಿರೀಕ್ಷಿತ ರೈತರ ಸಾಲಮನ್ನಾ ಘೋಷಣೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ಅಧಿವೇಶನದಲ್ಲಿ ಗುರುವಾರ ಪ್ರಕಟಿಸಿದ್ದು, 2 ಲಕ್ಷ ರೂ. ವರೆಗಿನ ಸಾಲವನ್ನು ಮನ್ನಾ ಮಾಡಿದ್ದಾರೆ. ಈ ಕ್ರಮದಿಂದಾಗಿ ಸರಕಾರಕ್ಕೆ 34 ಸಾವಿರ ಕೋಟಿ ರೂ. ಹೊರೆಯಾಗಲಿದೆ.
ಮೈತ್ರಿ ಸರ್ಕಾರ ರಚನೆಯಾದಂದಿನಿಂದ ಜೆಡಿಎಸ್ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕೆಂಬ ಕೂಗು ಕೇಳಿಬಂದಿತ್ತು. ಇದರ ಹಿನ್ನೆಲೆಯಲ್ಲಿಯೇ ಮುಖ್ಯಮಂತ್ರಿ ತಮ್ಮ ಮೊದಲ ಬಜೆಟ್ನಲ್ಲಿ ಸಾಲಮನ್ನಾ ಘೋಷಣೆ ಮಾಡಿದ್ದಾರೆ.
ಮೊದಲ ಹಂತದಲ್ಲಿ ರಾಷ್ಟ್ರೀಯ ಮತ್ತು ಸಹಕಾರ ಬ್ಯಾಂಕುಗಳ ಸುಸ್ತಿ ಬೆಳೆ ಸಾಲಮನ್ನಾ ಘೋಷಣೆ ಮಾಡಿದ್ದು, ಡಿಸೆಂಬರ್ವರೆಗಿನ ರೈತರ ಸುಸ್ತಿ ಬೆಳೆ ಸಾಲಮನ್ನಾ ಮಾಡಲು ತೀರ್ಮಾನಿಸಿದೆ. ಸಕಾಲದಲ್ಲಿ ಸಾಲ ಮರುಪಾವತಿ ಮಾಡಿರುವ, ಸುಸ್ತಿದಾರರಲ್ಲದ ರೈತರ ಸಾಲದ ಖಾತೆಗಳಿಗೆ 25 ಸಾವಿರ ತುಂಬಲು ನಿರ್ಧರಿಸಲಾಗಿದೆ.
ಈ ಬೆಳೆ ಸಾಲ ಮನ್ನಾ ಯೋಜನೆಯಿಂದ ಸುಮಾರು 34,000 ಕೋಟಿ ರೂ. ಗಳ ಮೊತ್ತದ ಪ್ರಯೋಜನ ರೈತರಿಗೆ ದೊರೆಯಲಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಸಹಕಾರಿ ಕ್ಷೇತ್ರದ ಅಧಿಕಾರಿಗಳ ಕುಟುಂಬಗಳು ಹಾಗೂ ಕಳೆದ 3 ವರ್ಷಗಳಲ್ಲಿ ಆದಾಯ ತೆರಿಗೆ ಕಟ್ಟಿರುವಂತಹ ರೈತರುಗಳು ಹಾಗೂ ಇತರೆ ಅನರ್ಹ ಕೃಷಿ ಸಾಲಗಾರರು ಈ ಸಾಲ ಮನ್ನಾ ಯೋಜನೆಯಿಂದ ಹೊರಗೆ ಇರಲಿದ್ದಾರೆ.
ರೈತರಿಗೆ ಹೊಸ ಸಾಲ ಪಡೆಯಲು ಅನುಕೂಲವಾಗುವಂತೆ ಸರ್ಕಾರವು ಅವರ ಸುಸ್ತಿ ಖಾತೆಯಲ್ಲಿರುವ ಬಾಕಿಯನ್ನು ಮನ್ನಾ ಮಾಡಿ ಋಣಮುಕ್ತ ಪತ್ರವನ್ನು ನೀಡಲು ಕ್ರಮ ಕೈಗೊಳ್ಳಲಿದೆ. ಈ ಉದ್ದೇಶಕ್ಕಾಗಿ 2018-19ರ ಆಯವ್ಯಯದಲ್ಲಿ 6,500 ಕೋಟಿ ರೂ. ನಿಗದಿಪಡಿಸಿರುತ್ತೇನೆ. ಇದಲ್ಲದೆ ಹಿಂದಿನ ಸರ್ಕಾರವು ಸಹಕಾರಿ ಬ್ಯಾಂಕ್ ಗಳಲ್ಲಿ ರೈತರು ಮಾಡಿದ ಸುಮಾರು 8,165 ಕೋಟಿ ರೂ. ಸಾಲ ಮನ್ನಾ ಮಾಡಿ ಅದರಲ್ಲಿ 4,165 ಕೋಟಿ ರೂ.ಗಳನ್ನು ಹಿಂದಿನ ವರ್ಷ ಬಿಡುಗಡೆ ಮಾಡಿದೆ. ಉಳಿದ 4,000 ಕೋಟಿ ರು.ಗಳನ್ನು ಸಹ ಪಾವತಿ ಮಾಡಲು ಈ ಆಯವ್ಯಯದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…