ಭಟ್ಕಳ : ಇರಾನ್ಗೆ ಉದ್ಯೋಗಕ್ಕೆ ತೆರಳಿ ಅಲ್ಲಿನ ನೌಕೆಯೊಂದರಲ್ಲಿ ಕಳೆದ 20 ತಿಂಗಳುಗಳಿಂದ ಸಿಲುಕಿಕೊಂಡಿದ್ದ ಭಟ್ಕಳ ಅಝಾದ್ ನಗರದ ಯುವಕ ಯಾಸೀನ್ ಶಾಹ ಮಕಾನ್ದಾರ್(31) ಬುಧವಾರ ಬೆಂಗಳೂರು ತಲುಪಿದ್ದು, ಗುರುವಾರ ಭಟ್ಕಳ ತಲುಪಲಿದ್ದಾರೆ.
ಬೆಂಗಳೂರು ತಲುಪಿದ ಬಳಿಕ ಪತ್ರಿಕೆಯೊಂದಿಗೆ ಮಾತನಾಡಿದ ಯಾಸೀನ್ ಶಾಹ ಮಕಾನ್ದಾರ್, ನನ್ನನ್ನು ಕಷ್ಟದಿಂದ ಪಾರುಮಾಡಿದ ಏಮ್ ಇಂಡಿಯಾ ಫೋರಂನ ಶಿರಾಲಿ ಮುಝಫ್ಫರ್ ಶೇಕ್ ಹಾಗೂ ಭಟ್ಕಳದ ಯೂಸೂಫ್ ಬರ್ಮಾವರ್, ಸರಫ್ರಾಝ್ ಶೇಕ್, ಅಫ್ಝಲ್ ಎಸ್.ಎಂ. ಹಾಗೂ ನ್ಯಾಯವಾದಿ ಯಾಸಿರ್ ಅರಫಾತ್ ಮಕಾನ್ದಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ವಿಸಾ ಏಜೆಂಟರ ಮೂಲಕ ಇರಾನ್ ನೌಕೆಯೊಂದರಲ್ಲಿ ಕೆಲಸಕ್ಕೆ ಸೇರಿದ್ದೆ. ಆದರೆ, ಕಳೆದ 20 ತಿಂಗಳುಗಳಿಂದ ಹಡಗಿನಲ್ಲಿ ಸಿಲುಕಿಕೊಂಡಿದ್ದು ವೇತನವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಈ ಸಂದರ್ಭ ಭಾರತಕ್ಕೆ ಮರಳುವ ಕುರಿತು ಯೋಚಿಸಿದ್ದೆ. ಆದರೆ, ಯಾರ ಸಂಪರ್ಕವೂ ಇಲ್ಲದಿದ್ದ ಕಾರಣ ಏನೂ ಮಾಡಲಾದ ಸ್ಥಿತಿಯಲ್ಲಿದ್ದೆ ಎಂದರು.
ಬಳಿಕ ಏಮ್ಸ್ ಇಂಡಿಯಾ ಫೋರಂನ ಶಿರಾಲಿ ಮುಝಪ್ಪರ್ ಶೇಕ್ ಮತ್ತು ಅವರ ತಂಡ ನನ್ನನ್ನು ಸಂಪರ್ಕಿಸಿ ಪ್ರತಿ ಹೆಜ್ಜೆಗೂ ಮಾರ್ಗದರ್ಶನ ನೀಡಿತು. ಅವರ ಮಾರ್ಗದರ್ಶನದಂತೆ ಇದೀಗ ನನ್ನ ತಾಯ್ನೆಡಿಗೆ ತಲುಪಿದ್ದೇನೆ. ಅಲ್ಲದೆ, ತಂಡದ ಪ್ರಯತ್ನದ ಫಲವಾಗಿ ನನಗೆ ಬರಬೇಕಾಗಿದ್ದ 3,800 ಡಾಲರ್ ವೇತನದಲ್ಲಿ 2,000 ಡಾಲರ್ ವೇತನ ದೊರೆತಿದೆ. ಇದಕ್ಕಾಗಿ ಅವರಿಗೆ ನಾನು ಋಣಿಯಾಗಿದ್ದೇನೆ ಎಂದು ಹೇಳಿದರು.
ಇರಾನ್ನಿಂದ ಬೆಂಗಳೂರಿಗೆ ಬಂದ ನನಗೆ ಅಲ್ಲಿ ಉಳಿದುಕೊಳ್ಳುವ ವ್ಯವಸ್ಥೆಯ ಜೊತೆಗೆ ಭಟ್ಕಳಕ್ಕೆ ತೆರಳಲು ಬಸ್ ಟಿಕೆಟ್, ಊಟ, ತಿಂಡಿಯ ವ್ಯವಸ್ಥೆಯನ್ನೂ ಏಮ್ ಇಂಡಿಯಾ ಫೋರಂ ಮಾಡಿದೆ ಎಂದು ಭಾವುಕರಾದ ಯಾಸೀನ್ ಶಾಹ, ಏಮ್ ಇಂಡಿಯಾ ಫೋರಂಗೆ ಕೃತಜ್ಞತೆ ಸಲ್ಲಿಸಿದರು.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…