ಗಾಂಧಿನಗರ: ಗುಜರಾತ್ನ ಶ್ರೀಮಂತ ಉದ್ಯಮಿ ತಮ್ಮ 200 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ದಾನ ಮಾಡುವ ಮೂಲಕ ಪತ್ನಿಯೊಂದಿಗೆ ಸನ್ಯಾಸತ್ವ ಸ್ವೀಕರಿಸಲು ಮುಂದಾಗಿದ್ದಾರೆ.
ಸಬರ್ಕಾಂತ ಜಿಲ್ಲೆಯ ಹಿಮ್ಮತ್ನಗರದ ಉದ್ಯಮಿ ಭವೇಶ್ ಭಾಯ್ ಭಂಡಾರಿ ಮತ್ತು ಅವರ ಪತ್ನಿ ಜೈನ ದೀಕ್ಷೆ ತೆಗೆದುಕೊಂಡು ಸನ್ಯಾಸಿಯಾಗಲಿದ್ದಾರೆ.
ಸನ್ಯಾಸತ್ವ ಸ್ವೀಕಾರ ಹಿನ್ನೆಲೆ ಫೆಬ್ರವರಿಯಲ್ಲಿ ತಮ್ಮ 200 ಕೋಟಿ ರೂ. ಸಂಪತ್ತನ್ನು ದತ್ತಿ ಸಂಸ್ಥೆಗೆ ದಾನ ಮಾಡಿದ್ದು, ಈ ತಿಂಗಳ ಕೊನೆಯಲ್ಲಿ ಅಧಿಕೃತವಾಗಿ ಸನ್ಯಾಸತ್ವ ಸ್ವೀಕರಿಸಲಿದ್ದಾರೆ.ಭವೇಶ್ ದಂಪತಿಯ ಮಕ್ಕಳು ಸಹ 2 ವರ್ಷಗಳ ಹಿಂದೆ ದೀಕ್ಷೆ ಪಡೆದಿದ್ದರು. ಮಕ್ಕಳಿಂದ ಸ್ಫೂರ್ತಿ ಪಡೆದ ದಂಪತಿ ಕೂಡ ಇದೀಗ ಆಸ್ತಿ ಸಂಪತ್ತನ್ನು ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಲಿದ್ದಾರೆ.
ಏಪ್ರಿಲ್ 22ರಂದು ಭವೇಶ್ ದಂಪತಿ ಸನ್ಯಾಸತ್ವ ತೆಗೆದುಕೊಳ್ಳಲಿದ್ದು, ಬಳಿಕ ಲೌಕಿಕ ಜೀವನವನ್ನು ತ್ಯಜಿಸಲಿದ್ದಾರೆ. ಜೈನ ಸಮಾಜದಲ್ಲಿ ದೀಕ್ಷೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ದೀಕ್ಷೆ ತೆಗೆದುಕೊಳ್ಳುವವರು ಭಿಕ್ಷೆ ಬೇಡುವ ಮೂಲಕ ಜೀವನ ಸಾಗಿಸಬೇಕು. ಐಷಾರಾಮಿ ಜೀವನವನ್ನು ತ್ಯಜಿಸಬೇಕು. ಅಷ್ಟೇ ಅಲ್ಲದೇ ಜೀವನ ಪರ್ಯಂತ ಬರಿಗಾಲಿನಲ್ಲಿ ಇಡೀ ಭಾರತದಾದ್ಯಂತ ತಿರುಗಾಡಬೇಕಾಗುತ್ತದೆ.
ಹುಟ್ಟಿನಿಂದಲೇ ಶ್ರೀಮಂತ ಮನೆತನದಲ್ಲಿ ಬೆಳೆದ ಭವೇಶ್ ಭಂಡಾರಿ ಅವರ ಸನ್ಯಾಸತ್ವದ ನಿರ್ಧಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. .ಭವೇಶ್ ದಂಪತಿ ಇತರೆ ಮಂದಿಯೊಂದಿಗೆ ಸುಮಾರು 4 ಕಿ.ಮೀ ಮೆರವಣಿಗೆ ತೆರಳಿ ಬಳಿಕ ತಮ್ಮಲ್ಲಿದ್ದ ಮೊಬೈಲ್ ಸೇರಿದಂತೆ ಸಮಸ್ತ ಆಸ್ತಿಯನ್ನು ದಾನ ಮಾಡಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…