200 ಮುಸ್ಲಿಂ ಮೌಲ್ವಿಗಳು ಸೇರಿ ಒಟ್ಟು 600 ವಿದೇಶಿ ಪ್ರಜೆಗಳ ಗಡಿಪಾರು ಮಾಡಿದ ಶ್ರೀಲಂಕಾ -Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಕೊಲಂಬೊ : ಶ್ರೀಲಂಕಾದಲ್ಲಿ ಕಳೆದ ಈಸ್ಟರ್ ಭಾನುವಾರದಂದು ನಡೆದ ಸರಣಿ ಬಾಂಬ್ ಸ್ಪೋಟದ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ 200 ಇಸ್ಲಾಮಿಕ್ ಧರ್ಮ ಬೋಧಕರು ಸೇರಿ 600 ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡಿದೆ.

ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಶ್ರೀಲಂಕಾ ಗೃಹ ಸಚಿವ ವಜ್ರ ಅಭ್ಯವರ್ಧನೆ, ಈ ಎಲ್ಲ ವಿದೇಶಿಗರು ಕಾನೂನಾತ್ಮಕವಾಗಿಯೇ ದೇಶಕ್ಕೆ ಬಂದಿದ್ದಾರೆ. ಆದರೆ ಭದ್ರತೆ ಹಾಗೂ ಅವರ ವೀಸಾ ಅವಧಿ ಮುಗಿದಿರುವ ಕಾರಣದಿಂದಾಗಿ ದಂಡ ವಿಧಿಸಿ ಅವರನ್ನು ದೇಶದಿಂದ ಹೊರಹಾಕಲಾಗಿದೆ. ವೀಸಾ ವ್ಯವಸ್ಥೆಯನ್ನು ಮತ್ತಷ್ಟು ಕಠಿಣಗೊಳಿಸಿದ್ದು ಧಾರ್ಮಿಕ ಶಿಕ್ಷಕರಿಗೆ ವೀಸಾ ನಿರ್ಬಂಧಿಸಲಾಗಿದೆ.

ಹಾಗೂ ಹೊರಹಾಕಲ್ಪಟ್ಟ ಮೌಲ್ವಿಗಳು ಬಾಂಗ್ಲಾ, ಭಾರತ, ಮಾಲ್ಡೀವ್ಸ್ ಮತ್ತು ಪಾಕಿಸ್ತಾನ ದೇಶಕ್ಕೆ ಸೇರಿದವರಾಗಿದ್ದಾರೆ ಎಂದು ಗೃಹ ಸಚಿವರು ಹೇಳಿದ್ದಾರೆ.

ಇನ್ನು ಈಸ್ಟರ್ ಭಾನುವಾರ ದಾಳಿ ನಡೆದ ನಂತರ ಶ್ರೀಲಂಕಾದಲ್ಲಿ ಭದ್ರತಾ ಪಡೆ ನಡೆಸಿದ ಎಲ್ಲಾ ಕಾರ್ಯಾಚರಣೆ ಬಳಿಕ ಸೋಮವಾರದಿಂದ ಶಾಲಾ-ಕಾಲೇಜುಗಳು ಪುನಾರಾಂಭವಾಗಲಿವೆ ಎಂದು ಪೊಲೀಸ್ ಇಲಾಖೆಯ ವಕ್ತಾರ ರನ್ ವಾಲ್ ಗುಣಶೇಖರ್ ಹೇಳಿದ್ದಾರೆ.