Featured

200 ಮುಸ್ಲಿಂ ಮೌಲ್ವಿಗಳು ಸೇರಿ ಒಟ್ಟು 600 ವಿದೇಶಿ ಪ್ರಜೆಗಳ ಗಡಿಪಾರು ಮಾಡಿದ ಶ್ರೀಲಂಕಾ -Vishwanews24

ಕೊಲಂಬೊ : ಶ್ರೀಲಂಕಾದಲ್ಲಿ ಕಳೆದ ಈಸ್ಟರ್ ಭಾನುವಾರದಂದು ನಡೆದ ಸರಣಿ ಬಾಂಬ್ ಸ್ಪೋಟದ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ 200 ಇಸ್ಲಾಮಿಕ್ ಧರ್ಮ ಬೋಧಕರು ಸೇರಿ 600 ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡಿದೆ.

ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಶ್ರೀಲಂಕಾ ಗೃಹ ಸಚಿವ ವಜ್ರ ಅಭ್ಯವರ್ಧನೆ, ಈ ಎಲ್ಲ ವಿದೇಶಿಗರು ಕಾನೂನಾತ್ಮಕವಾಗಿಯೇ ದೇಶಕ್ಕೆ ಬಂದಿದ್ದಾರೆ. ಆದರೆ ಭದ್ರತೆ ಹಾಗೂ ಅವರ ವೀಸಾ ಅವಧಿ ಮುಗಿದಿರುವ ಕಾರಣದಿಂದಾಗಿ ದಂಡ ವಿಧಿಸಿ ಅವರನ್ನು ದೇಶದಿಂದ ಹೊರಹಾಕಲಾಗಿದೆ. ವೀಸಾ ವ್ಯವಸ್ಥೆಯನ್ನು ಮತ್ತಷ್ಟು ಕಠಿಣಗೊಳಿಸಿದ್ದು ಧಾರ್ಮಿಕ ಶಿಕ್ಷಕರಿಗೆ ವೀಸಾ ನಿರ್ಬಂಧಿಸಲಾಗಿದೆ.

ಹಾಗೂ ಹೊರಹಾಕಲ್ಪಟ್ಟ ಮೌಲ್ವಿಗಳು ಬಾಂಗ್ಲಾ, ಭಾರತ, ಮಾಲ್ಡೀವ್ಸ್ ಮತ್ತು ಪಾಕಿಸ್ತಾನ ದೇಶಕ್ಕೆ ಸೇರಿದವರಾಗಿದ್ದಾರೆ ಎಂದು ಗೃಹ ಸಚಿವರು ಹೇಳಿದ್ದಾರೆ.

ಇನ್ನು ಈಸ್ಟರ್ ಭಾನುವಾರ ದಾಳಿ ನಡೆದ ನಂತರ ಶ್ರೀಲಂಕಾದಲ್ಲಿ ಭದ್ರತಾ ಪಡೆ ನಡೆಸಿದ ಎಲ್ಲಾ ಕಾರ್ಯಾಚರಣೆ ಬಳಿಕ ಸೋಮವಾರದಿಂದ ಶಾಲಾ-ಕಾಲೇಜುಗಳು ಪುನಾರಾಂಭವಾಗಲಿವೆ ಎಂದು ಪೊಲೀಸ್ ಇಲಾಖೆಯ ವಕ್ತಾರ ರನ್ ವಾಲ್ ಗುಣಶೇಖರ್ ಹೇಳಿದ್ದಾರೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

1 day ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

1 day ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

1 day ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

1 day ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

1 day ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

1 day ago