200 ಯೂನಿಟ್ ವಿದ್ಯುತ್ ಫ್ರೀ ಕೊಡಿ ಎನ್ನುವವರಿಗೆ ವಿವೇಕ ಇದೆಯಾ..? : ಸಿಎಂ ಸಿದ್ದರಾಮಯ್ಯ – Vishwanews24
200 ಯೂನಿಟ್ ವಿದ್ಯುತ್ ಫ್ರೀ ಕೊಡಿ ಎನ್ನುವವರಿಗೆ ವಿವೇಕ ಇದೆಯಾ..? : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಗೃಹಜ್ಯೋತಿಯಡಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಿ ಎಂಬ ಬಿಜೆಪಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದ ಅವರು ನೀವು ವಿವೇಕ ಇಟ್ಟುಕೊಂಡು ಮಾತನಾಡಬೇಕು, 200 ಯೂನಿಟ್ ಹೇಳಿದ್ದೀರಿ, ಅಷ್ಟೇ ಕೊಡಿ ಎಂದು ಹೇಳುತ್ತಿದ್ದಾರೆ.
ಎಷ್ಟು ವಿದ್ಯುತ್ ಬಳಸುತ್ತಿದ್ದಾರೋ ಅಷ್ಟನ್ನೇ ಬಳಸಬೇಕು. ಹೆಚ್ಚು ಬಳಸಿದರೆ ದುಂದು ವೆಚ್ಚ ಆಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ಜನರಿಗೆ ನೀಡಿರುವ ಉಚಿತ ವಿದ್ಯುತ್ ವಿಚಾರವಾಗಿ ವಿಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕಾಪು: ಇನ್ನಂಜೆ ರೈಲು ನಿಲ್ದಾಣದಲ್ಲಿ ರೈಲು ನಿಲಗಡೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆಗೆ ಮನವಿ – Vishwanews24
ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದ ಅವರು, ವರ್ಷದಲ್ಲಿ ಜನರು ಎಷ್ಟು ವಿದ್ಯುತ್ ಬಳಕೆ ಮಾಡುತ್ತಿದ್ದಾರೋ ವಾರ್ಷಿಕ ಸರಾಸರಿ ಮೇಲೆ ಹೆಚ್ಚುವರಿ 10% ನೀಡಲು ಅವಕಾಶ ಕೊಟ್ಟಿದ್ದೇವೆ. ಅದರ ಮೇಲೆ ಹೆಚ್ಚು ವಿದ್ಯುತ್ ಬಳಸಿದ್ರೆ ಕಟ್ಟಬೇಕು. ಆದರೆ ವಿಪಕ್ಷಗಳು ಅಪಪ್ರಚಾರ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ.ಜನರಿಗೆ ನಿಯಮಿತವಾಗಿ ವಿದ್ಯುತ್ ಬಳಸಿ ಅಂತಾ ಹೇಳೋದು ತಪ್ಪಾ? ನಾನೊಬ್ಬನೇ ಬದಕಿದ್ರೆ ಸಾಲದು, ನನ್ನ ಸುತ್ತ ಇರುವವರೆಲ್ಲಾ ಬದಕಬೇಕು. ವಿಪಕ್ಷದವರು ವಿರೋಧ ಮಾಡುತ್ತಲೇ ಇರಲಿ ಎಂದು ಹೇಳಿದ್ದಾರೆ.
