ಬೆಂಗಳೂರು : ಗೃಹಜ್ಯೋತಿಯಡಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಿ ಎಂಬ ಬಿಜೆಪಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದ ಅವರು ನೀವು ವಿವೇಕ ಇಟ್ಟುಕೊಂಡು ಮಾತನಾಡಬೇಕು, 200 ಯೂನಿಟ್ ಹೇಳಿದ್ದೀರಿ, ಅಷ್ಟೇ ಕೊಡಿ ಎಂದು ಹೇಳುತ್ತಿದ್ದಾರೆ.
ಎಷ್ಟು ವಿದ್ಯುತ್ ಬಳಸುತ್ತಿದ್ದಾರೋ ಅಷ್ಟನ್ನೇ ಬಳಸಬೇಕು. ಹೆಚ್ಚು ಬಳಸಿದರೆ ದುಂದು ವೆಚ್ಚ ಆಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ಜನರಿಗೆ ನೀಡಿರುವ ಉಚಿತ ವಿದ್ಯುತ್ ವಿಚಾರವಾಗಿ ವಿಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದ ಅವರು, ವರ್ಷದಲ್ಲಿ ಜನರು ಎಷ್ಟು ವಿದ್ಯುತ್ ಬಳಕೆ ಮಾಡುತ್ತಿದ್ದಾರೋ ವಾರ್ಷಿಕ ಸರಾಸರಿ ಮೇಲೆ ಹೆಚ್ಚುವರಿ 10% ನೀಡಲು ಅವಕಾಶ ಕೊಟ್ಟಿದ್ದೇವೆ. ಅದರ ಮೇಲೆ ಹೆಚ್ಚು ವಿದ್ಯುತ್ ಬಳಸಿದ್ರೆ ಕಟ್ಟಬೇಕು. ಆದರೆ ವಿಪಕ್ಷಗಳು ಅಪಪ್ರಚಾರ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ.ಜನರಿಗೆ ನಿಯಮಿತವಾಗಿ ವಿದ್ಯುತ್ ಬಳಸಿ ಅಂತಾ ಹೇಳೋದು ತಪ್ಪಾ? ನಾನೊಬ್ಬನೇ ಬದಕಿದ್ರೆ ಸಾಲದು, ನನ್ನ ಸುತ್ತ ಇರುವವರೆಲ್ಲಾ ಬದಕಬೇಕು. ವಿಪಕ್ಷದವರು ವಿರೋಧ ಮಾಡುತ್ತಲೇ ಇರಲಿ ಎಂದು ಹೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…