ಇಸ್ಲಾಮಾಬಾದ್: ಬಿಜೆಪಿ 2004ರ ಲೋಕಸಭಾ ಚುನಾವಣೆಯಲ್ಲಿ ಸೋಲದಿದ್ದರೆ ಕಾಶ್ಮೀರ ಸಮಸ್ಯೆಯನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇತ್ಯರ್ಥಪಡಿಸುತ್ತಿದ್ದರು ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸ್ಮರಿಸಿಕೊಂಡಿದ್ದಾರೆ.
ಅಲ್ಲದೇ ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ನೆನೆದಿರುವ ಇಮ್ರಾನ್, 2004 ರಲ್ಲಿ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಕಾಶ್ಮೀರ ವಿಚಾರವನ್ನು ಬಗೆಹರಿಸುವುದಾಗಿ ಸಮ್ಮೇಳನವೊಂದರಲ್ಲಿ ತಮ್ಮ ಬಳಿ ಹೇಳಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.
ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಯುದ್ಧ ಒಂದೇ ಪರಿಹಾರವಲ್ಲಾ, ಉಭಯ ದೇಶಗಳು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ . ಮಾತುಕತೆ ಹೊರತುಪಡಿಸಿ ಬೇರೆ ಪರ್ಯಾಯ ಮಾರ್ಗಗಳ ಮೂಲಕ ಚರ್ಚೆ ಸಾಧ್ಯವಿಲ್ಲ ಎಂದು ಅವರು ವಿದ್ಯುನ್ಮಾನ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಎರಡು ಪರಮಾಣು ರಾಷ್ಟ್ರಗಳು ಯುದ್ಧ ಮಾಡಲು ಸಾಧ್ಯವಿಲ್ಲ. ನೆರೆಯ ಎಲ್ಲಾ ರಾಷ್ಟ್ರಗಳೊಂದಿಗೆ ಶಾಂತಿಯುತ ಒಪ್ಪಂದಕ್ಕೆ ಗಂಭೀರವಾಗಿ ಯೋಚಿಸಲಾಗುತ್ತಿದೆ. ಆದರೆ, ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಮಾತುಕತೆಗೆ ಸಿದ್ಧವಾಗಿಲ್ಲ ಎಂದು ಇಮ್ರಾನ್ ಖಾನ್ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…