Featured

2008 ಮಾಲೆಗಾಂವ್ ಸ್ಫೋಟ ಪ್ರಕರಣ:  ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳು ಖುಲಾಸೆ – vishwanews24

2008 ಮಾಲೆಗಾಂವ್ ಸ್ಫೋಟ ಪ್ರಕರಣ:  ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ  7 ಆರೋಪಿಗಳು ಖುಲಾಸೆ

ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳಿಗೂ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದ ತನಿಖೆಯೇ ಸರಿಯಾಗಿ ನಡೆದಿಲ್ಲ ಎಂದು ಎನ್‍ಐಎ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಏಪ್ರಿಲ್ 19ರಂದು ಪ್ರಕರಣದ ವಿಚಾರಣೆ ಮುಗಿಸಿದ್ದ ಕೋರ್ಟ್, ಮೇ 8ರಂದು ಕೋರ್ಟ್‌ನಲ್ಲಿ ಹಾಜರಿರುವಂತೆ ಆರೋಪಿಗಳಿಗೆ ಸೂಚಿಸಿತ್ತು. ನ್ಯಾಯಾಧೀಶರಾದ ಎ.ಕೆ.ಲಾಹೋಟಿ ಅವರು, ತೀರ್ಪು ಪ್ರಕಟಿಸಲು ಹೆಚ್ಚಿನ ಸಮಯ ಬೇಕು. ಜುಲೈ 31ರಂದು ಎಲ್ಲಾ ಆರೋಪಿಗಳು ಹಾಜರಿರಬೇಕು’ ಎಂದು ಆರೋಪಿಗಳಿಗೆ ತಿಳಿಸಿದ್ದರು.

ಏನಿದು ಪ್ರಕರಣ?
2008ರ ಸೆ.29ರಂದು ರಂಜಾನ್ ಮಾಸದಲ್ಲಿ ನವರಾತ್ರಿ ಆಚರಣೆಗೆ ಮುಂಚಿನ ದಿನ ಬಾಂಬ್ ಸ್ಫೋಟ ನಡೆದಿತ್ತು.‌ ಈ ಸ್ಫೋಟದಲ್ಲಿ 6 ಜನರು ಮೃತಪಟ್ಟು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಈ ಪ್ರಕರಣವನ್ನು ಮುಂಬೈ ಭಯೋತ್ಪಾದಕ ನಿಗ್ರಹ ಪಡೆ ಪ್ರಾಥಮಿಕ ತನಿಖೆ ನಡೆಸಿತ್ತು. ನಂತರ ತನಿಖೆಯ ಹೊಣೆಯನ್ನು ಎನ್‌ಐಎ ವಹಿಸಿಕೊಂಡಿತ್ತು. ಬಿಜೆಪಿ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್ (ನಿವೃತ್ತ), ಮೇಜರ್ ರಮೇಶ್ ಉಪಾಧ್ಯಾಯ (ನಿವೃತ್ತ) ಸೇರಿದಂತೆ ಏಳು ಮಂದಿ ಆರೋಪಿಗಳ ಮೇಲೆ ಐಪಿಸಿ, ಯುಎಪಿಎ ಅನ್ವಯ ಆರೋಪ ಹೊರಿಸಲಾಗಿತ್ತು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago