2008 ಮಾಲೆಗಾಂವ್ ಸ್ಫೋಟ ಪ್ರಕರಣ:  ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳು ಖುಲಾಸೆ – vishwanews24

Featured, ರಾಷ್ಟ್ರ ನ್ಯೂಸ್

2008 ಮಾಲೆಗಾಂವ್ ಸ್ಫೋಟ ಪ್ರಕರಣ:  ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ  7 ಆರೋಪಿಗಳು ಖುಲಾಸೆ

ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳಿಗೂ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದ ತನಿಖೆಯೇ ಸರಿಯಾಗಿ ನಡೆದಿಲ್ಲ ಎಂದು ಎನ್‍ಐಎ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಏಪ್ರಿಲ್ 19ರಂದು ಪ್ರಕರಣದ ವಿಚಾರಣೆ ಮುಗಿಸಿದ್ದ ಕೋರ್ಟ್, ಮೇ 8ರಂದು ಕೋರ್ಟ್‌ನಲ್ಲಿ ಹಾಜರಿರುವಂತೆ ಆರೋಪಿಗಳಿಗೆ ಸೂಚಿಸಿತ್ತು. ನ್ಯಾಯಾಧೀಶರಾದ ಎ.ಕೆ.ಲಾಹೋಟಿ ಅವರು, ತೀರ್ಪು ಪ್ರಕಟಿಸಲು ಹೆಚ್ಚಿನ ಸಮಯ ಬೇಕು. ಜುಲೈ 31ರಂದು ಎಲ್ಲಾ ಆರೋಪಿಗಳು ಹಾಜರಿರಬೇಕು’ ಎಂದು ಆರೋಪಿಗಳಿಗೆ ತಿಳಿಸಿದ್ದರು.

ಉಡುಪಿ: ಸಂತೆಕಟ್ಟೆ ಜಂಕ್ಷನ್‌ನಲ್ಲಿ ಕಾರು, ಬೈಕ್, ಲಾರಿ ಸರಣಿ ಅಪಘಾತ – vishwanews24

ಏನಿದು ಪ್ರಕರಣ?
2008ರ ಸೆ.29ರಂದು ರಂಜಾನ್ ಮಾಸದಲ್ಲಿ ನವರಾತ್ರಿ ಆಚರಣೆಗೆ ಮುಂಚಿನ ದಿನ ಬಾಂಬ್ ಸ್ಫೋಟ ನಡೆದಿತ್ತು.‌ ಈ ಸ್ಫೋಟದಲ್ಲಿ 6 ಜನರು ಮೃತಪಟ್ಟು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಈ ಪ್ರಕರಣವನ್ನು ಮುಂಬೈ ಭಯೋತ್ಪಾದಕ ನಿಗ್ರಹ ಪಡೆ ಪ್ರಾಥಮಿಕ ತನಿಖೆ ನಡೆಸಿತ್ತು. ನಂತರ ತನಿಖೆಯ ಹೊಣೆಯನ್ನು ಎನ್‌ಐಎ ವಹಿಸಿಕೊಂಡಿತ್ತು. ಬಿಜೆಪಿ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್ (ನಿವೃತ್ತ), ಮೇಜರ್ ರಮೇಶ್ ಉಪಾಧ್ಯಾಯ (ನಿವೃತ್ತ) ಸೇರಿದಂತೆ ಏಳು ಮಂದಿ ಆರೋಪಿಗಳ ಮೇಲೆ ಐಪಿಸಿ, ಯುಎಪಿಎ ಅನ್ವಯ ಆರೋಪ ಹೊರಿಸಲಾಗಿತ್ತು.

ಉಡುಪಿ: ಕಡಲ್ಕೊರೆತ ತಡೆಗೆ 300 ಕೋಟಿ ರೂ. ಯೋಜನೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ – vishwanews24

Leave a Reply