Featured

2019ರಲ್ಲಿ ಹೆಚ್ಚಿನ ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯುತ್ತೇವೆ: ಪ್ರಧಾನಿ ಮೋದಿ

ನವದೆಹಲಿ: ಕಳೆದ 4 ವರ್ಷಗಳ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾಗಿರುವ ಜನಪರ ಕಾರ್ಯಕ್ರಮಗಳೇ ಮುಂದಿನ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸುತ್ತವೆ. 2014 ರ ಚುನಾವಣೆಯಲ್ಲಿ ಪಡೆದ ಸ್ಥಾನಗಳಿಗಿಂತಲೂ ಹೆಚ್ಚಿನ ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯುತ್ತೇವೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳಿಗೆ ವಿಶೇಷ ಸಂದರ್ಶನ ನೀಡಿ ಮಾತನಾಡಿದ ಅವರು, ಪ್ರತಿಪಕ್ಷಗಳ ಮಹಾಮೈತ್ರಿಯಿಂದ ರಚಿಸಿದ ಸಮ್ಮಿಶ್ರ ಸರ್ಕಾರಗಳು ಜನರಿಗೆ ಕಹಿ ಅನುಭವವನ್ನು ನೀಡಿದೆ. ಅದು ಜನರೊಂದಿಗೆ ಮೈತ್ರಿ ಸಾಧಿಸಲಾರದು. ದೇಶದ ಜನರು ಸ್ಥಿರ ಹಾಗೂ ಸದೃಢ ಸರ್ಕಾರ ಬೇಕೆಂದು ಬಯಸುತ್ತಿದ್ದಾರೆ ಎಂದು ವಿರೋಧಿ ಪಕ್ಷಗಳ ಮಹಾಮೈತ್ರಿ ಕುರಿತು ವಾಗ್ದಾಳಿ ನಡೆಸಿದರು.

ಇದೇ ವೇಳೆ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು ವಿಪಕ್ಷಗಳ ಅಹಂಕಾರವನ್ನು ತೋರಿಸುತ್ತದೆ ಎಂದು ಕಿಡಿಕಾರಿದ ಪ್ರಧಾನಿ, ನಾವು ಕಾಮ್‍ದಾರ್ ಗಳೇ ಹೊರತು ನಾಮಧಾರ್ ಗಳಲ್ಲ. ನಮ್ಮಲ್ಲಿ ಅಂತಹ ಆಯ್ಕೆಗಳಿಲ್ಲ, ಗೋರಕ್ಷಣೆ ಸಂಬಂಧಿ ಹಿಂಸೆ, ಹಲ್ಲೆ, ಹತ್ಯೆ ಪ್ರಕರಣಗಳ ನಿಯಂತ್ರಣಕ್ಕಾಗಿ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಅವ್ಯವಹಾರಗಳಿಗೆ ಕಡಿವಾಣ ಹಾಕಲಾಗಿದ್ದು, ಉದ್ಯಮ ಸ್ನೇಹಿ ವಾತಾವರಣ ಸೃಷ್ಟಿಗೆ ಸರ್ಕಾರ ಬದ್ಧವಾಗಿದೆ. ಕಳೆದ ಒಂದು ವರ್ಷದಲ್ಲಿ 45 ಲಕ್ಷ ಉದ್ಯೋಗಗಳು ಸೃಷ್ಟಿಯಾಗಿವೆ. ದೇಶದಲ್ಲಿ ಪ್ರವಾಸೋದ್ಯಮ, ನವ ಉದ್ಯಮ, ನಿರ್ಮಾಣ ಕ್ಷೇತ್ರ ಹಾಗೂ ಮುದ್ರಾ ಯೋಜನೆ ಅಡಿಯೂ ಹಲವು ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲಾಗಿದೆ. ರಫೇಲ್ ವಿವಾದದ ಬಗ್ಗೆ ಕಾಂಗ್ರೆಸ್ ಸುಳ್ಳು ಹೆಣೆಯುತ್ತಿದೆ, ರಫೇಲ್ ಒಪ್ಪಂದ ಸರ್ಕಾರದ ಪ್ರಮಾಣಿಕ ಒಪ್ಪಂದವಾಗಿದೆ. ಭಾರತ ಮತ್ತು ಅಮೆರಿಕ ಜಗತ್ತಿನ ಆರ್ಥಿಕತೆಯ ಎರಡು ಇಂಜಿನ್‍ಗಳು, ಅಮೆರಿಕದೊಂದಿಗೆ ನಮ್ಮ ಸಂಬಂಧ ಮುಂದುವರಿಯಲಿದೆ ಎಂದು ಸ್ಪಷ್ಟನೆ ನೀಡಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

7 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

7 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

8 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

8 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

8 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

10 hours ago