Featured

2019ರಲ್ಲಿ ಹೆಚ್ಚಿನ ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯುತ್ತೇವೆ: ಪ್ರಧಾನಿ ಮೋದಿ

ನವದೆಹಲಿ: ಕಳೆದ 4 ವರ್ಷಗಳ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾಗಿರುವ ಜನಪರ ಕಾರ್ಯಕ್ರಮಗಳೇ ಮುಂದಿನ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸುತ್ತವೆ. 2014 ರ ಚುನಾವಣೆಯಲ್ಲಿ ಪಡೆದ ಸ್ಥಾನಗಳಿಗಿಂತಲೂ ಹೆಚ್ಚಿನ ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯುತ್ತೇವೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳಿಗೆ ವಿಶೇಷ ಸಂದರ್ಶನ ನೀಡಿ ಮಾತನಾಡಿದ ಅವರು, ಪ್ರತಿಪಕ್ಷಗಳ ಮಹಾಮೈತ್ರಿಯಿಂದ ರಚಿಸಿದ ಸಮ್ಮಿಶ್ರ ಸರ್ಕಾರಗಳು ಜನರಿಗೆ ಕಹಿ ಅನುಭವವನ್ನು ನೀಡಿದೆ. ಅದು ಜನರೊಂದಿಗೆ ಮೈತ್ರಿ ಸಾಧಿಸಲಾರದು. ದೇಶದ ಜನರು ಸ್ಥಿರ ಹಾಗೂ ಸದೃಢ ಸರ್ಕಾರ ಬೇಕೆಂದು ಬಯಸುತ್ತಿದ್ದಾರೆ ಎಂದು ವಿರೋಧಿ ಪಕ್ಷಗಳ ಮಹಾಮೈತ್ರಿ ಕುರಿತು ವಾಗ್ದಾಳಿ ನಡೆಸಿದರು.

ಇದೇ ವೇಳೆ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು ವಿಪಕ್ಷಗಳ ಅಹಂಕಾರವನ್ನು ತೋರಿಸುತ್ತದೆ ಎಂದು ಕಿಡಿಕಾರಿದ ಪ್ರಧಾನಿ, ನಾವು ಕಾಮ್‍ದಾರ್ ಗಳೇ ಹೊರತು ನಾಮಧಾರ್ ಗಳಲ್ಲ. ನಮ್ಮಲ್ಲಿ ಅಂತಹ ಆಯ್ಕೆಗಳಿಲ್ಲ, ಗೋರಕ್ಷಣೆ ಸಂಬಂಧಿ ಹಿಂಸೆ, ಹಲ್ಲೆ, ಹತ್ಯೆ ಪ್ರಕರಣಗಳ ನಿಯಂತ್ರಣಕ್ಕಾಗಿ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಅವ್ಯವಹಾರಗಳಿಗೆ ಕಡಿವಾಣ ಹಾಕಲಾಗಿದ್ದು, ಉದ್ಯಮ ಸ್ನೇಹಿ ವಾತಾವರಣ ಸೃಷ್ಟಿಗೆ ಸರ್ಕಾರ ಬದ್ಧವಾಗಿದೆ. ಕಳೆದ ಒಂದು ವರ್ಷದಲ್ಲಿ 45 ಲಕ್ಷ ಉದ್ಯೋಗಗಳು ಸೃಷ್ಟಿಯಾಗಿವೆ. ದೇಶದಲ್ಲಿ ಪ್ರವಾಸೋದ್ಯಮ, ನವ ಉದ್ಯಮ, ನಿರ್ಮಾಣ ಕ್ಷೇತ್ರ ಹಾಗೂ ಮುದ್ರಾ ಯೋಜನೆ ಅಡಿಯೂ ಹಲವು ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲಾಗಿದೆ. ರಫೇಲ್ ವಿವಾದದ ಬಗ್ಗೆ ಕಾಂಗ್ರೆಸ್ ಸುಳ್ಳು ಹೆಣೆಯುತ್ತಿದೆ, ರಫೇಲ್ ಒಪ್ಪಂದ ಸರ್ಕಾರದ ಪ್ರಮಾಣಿಕ ಒಪ್ಪಂದವಾಗಿದೆ. ಭಾರತ ಮತ್ತು ಅಮೆರಿಕ ಜಗತ್ತಿನ ಆರ್ಥಿಕತೆಯ ಎರಡು ಇಂಜಿನ್‍ಗಳು, ಅಮೆರಿಕದೊಂದಿಗೆ ನಮ್ಮ ಸಂಬಂಧ ಮುಂದುವರಿಯಲಿದೆ ಎಂದು ಸ್ಪಷ್ಟನೆ ನೀಡಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

14 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

15 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

15 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

15 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

15 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

17 hours ago