ಬೆಂಗಳೂರು,: 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು , ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಪ್ರಧಾನಿಯಾಗಬೇಕೆಂಬ ಆಶಯ ಈಡೇರಿಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷ ಅಂದರೆ 2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ. ರಾಹುಲ್ ಗಾಂಧಿ ಅವರೇ ದೇಶದ ಪ್ರಧಾನಿಯಾಗಬೇಕೆಂಬುದು ನಮ್ಮೆಲ್ಲರ ಆಶಯ. ಅವರಿಗೆ ಯುವಜನರ ಆಶೋತ್ತರಗಳ ಪರಿಚಯವಿದೆ. ಅಂಥವರು ಪ್ರಧಾನಿಯಾಗುವ ಅಗತ್ಯವಿದೆ. ನಮ್ಮ ಆಶಯವೂ ಈಡೇರಲಿದೆ ಎಂದರು.
ಈಗಾಗಲೇ ಚುನಾವಣೆ ಪೂರ್ವ ಮೈತ್ರಿ ಸಂಬಂಧವೂ ಚರ್ಚೆ ನಡೆಯುತ್ತಿದೆ. ಸ್ಥಳೀಯವಾಗಿ ಹಾಗೂ ರಾಜಕೀಯವಾಗಿ ಹಲವಾರು ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ಕಾಂಗ್ರೆಸ್ ಎಷ್ಟು ಸ್ಥಾನಗಳನ್ನು ಗಳಿಸಲಿದೆ ಎಂಬ ವರದಿಯೂ ಇದೆ. ವರದಿ ಏನೇ ಹೇಳಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಚಿವ ಡಿ.ಕೆ.ಶಿವಕುಮಾರ್ ರಾಜೀನಾಮೆ ಕೇಳುವುದು ಅವೈಜ್ಞಾನಿಕ ಎಂದ ಅವರು, ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಇಲಾಖೆ ತನ್ನ ಅಧಿಕಾರವನ್ನು ಸಂಪೂರ್ಣ ದುರುಪಯೋಗಪಡಿಸಿಕೊಳ್ಳುತ್ತಿವೆ. ಈ ಹಿಂದೆಯೂ ಅವರ ಮೇಲೆ ಐಟಿ ದಾಳಿ ನಡೆದಿತ್ತು. ಅದು ದುರುದ್ದೇಶ ಹಾಗೂ ರಾಜಕೀಯ ಪ್ರೇರಿತ ಎಂದು ಹೇಳಿದರು.
ಅವರ ಮೇಲೆ ಐಟಿ ದಾಳಿ ಹೊಸದಲ್ಲ. ಡಿ.ಕೆ.ಶಿವಕುಮಾರ್ ಅವರು ಸಹ ತಮ್ಮ ಬಳಿ ಇರುವ ಮಾಹಿತಿ ಕೊಡುವುದಾಗಿ ಹೇಳಿದ್ದಾರೆ. ಆದರೆ ಕಾನೂನುಕ್ರಮ ಕೈಗೊಳ್ಳುವ ಬಗ್ಗೆ ನಮ್ಮ ಆಕ್ಷೇಪಣೆ ಏನಿಲ್ಲ. ಆದರೆ ಜವಾಬ್ದಾರಿಯುತ ಸಂಸ್ಥೆಗಳಿಂದ ಅಧಿಕಾರ ದುರುಪಯೋಗವಾಗುತ್ತಿರುವುದಕ್ಕೆ ಆಕ್ಷೇಪವಿದೆ. ಡಿ.ಕೆ.ಶಿವಕುಮಾರ್ ಅವರೊಂದಿಗೆ ಕಾಂಗ್ರೆಸ್ ಸದಾ ಇರುತ್ತದೆ ಎಂದು ತಿಳಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…