Featured

2019ರ ಮೋಟಾರು ವಾಹನ ತಿದ್ದುಪಡಿ ವಿಧೇಯಕ : ರಸ್ತೆ ಅಪಘಾತದಲ್ಲಿ ಅಪಘಾತ ಎಸಗಿದವರೇ ಸಂತ್ರಸ್ತರಿಗೆ ಪರಿಹಾರ ಕೊಡಬೇಕು -Vishwanews24

ನವದೆಹಲಿ : ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೋಟಾರು ವಾಹನ ತಿದ್ದುಪಡಿ ವಿಧೇಯಕ 2019 ರಲ್ಲಿ ಅಪಘಾತ ಎಸಗಿದವರೇ ಸಂತ್ರಸ್ತರಿಗೆ ಪರಿಹಾರ ಕೊಡಬೇಕು ಎಂಬ ನಿಯಮದ ಬಗ್ಗೆ ಲೋಕಸಭೆಯಲ್ಲಿ ಮಂಡಿಸಿದೆ.

ರಸ್ತೆ ಅಪಘಾತ ಪ್ರಕರಣದಲ್ಲಿ ಮೃತರಿಗೆ ವಾಹನ ಮಾಲೀಕರು ಅಥವಾ ವಿಮೆದಾರರು ಗರಿಷ್ಠ 5 ಲಕ್ಷ ರೂ. ಪರಿಹಾರ ನೀಡಬೇಕು. ಒಂದು ವೇಳೆ ಗಂಭೀರವಾಗಿ ಗಾಯಗೊಂಡವರಿಗೆ ಅಪಘಾತ ಮಾಡಿದದವರೇ 2.5 ಲಕ್ಷ ರೂ. ಕನಿಷ್ಠ ಆರ್ಥಿಕ ನೆರವು ನೀಡಬೇಕು. ಹಾಗೆಯೇ ವಾಹನ ಪರವಾನಗಿ ನವೀಕರಣದ ಅವಧಿಯಲ್ಲಿ 3 ವರ್ಷದಿಂದ 5 ವರ್ಷಕ್ಕೆ ಏರಿಸಲಾಗಿದೆ. ಜೊತೆಗೆ ವಿಶೇಷ ಚೇತನರಿಗೆ ಲೈಸನ್ಸ್ ನೀಡಲು ಸಾರಿಗೆ ಇಲಾಖೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ ಎನ್ನುವ ಬಗ್ಗೆ ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

2019 ರ ಮೋಟಾರು ವಾಹನ ತಿದ್ದುಪಡಿ ವಿಧೇಯಕದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ಭಾರಿ ದಂಡ ವಿಧಿಸಲಾಗುತ್ತದೆ. ಹಾಗೆಯೇ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಹಾಗೂ ಗಾಯಾಳುಗಳಿಗೆ ಹೆಚ್ಚಿನ ಪರಿಹಾರ ನೀಡುವುದು, ಮಾನವೀಯ ದೃಷ್ಟಿಯಲ್ಲಿ ಗಾಯಾಳುಗಳ ಸಹಾಯಕ್ಕೆ ಬರುವ ಸಾರ್ವಜನಿಕರಿಗೆ ಪೊಲೀಸ್ ವಿಚಾರಣೆಯ ಕಿರಿಕಿರಿಯಿಂದ ವಿನಾಯಿತಿ ನೀಡುವುದು, ಹೀಗೆ ಹಲವು ಸುಧಾರಣಾ ಕ್ರಮಗಳ ಬಗ್ಗೆ ತಿದ್ದುಪಡಿಯಲ್ಲಿ ಉಲ್ಲೇಖಿಸಲಾಗಿದೆ.

ಯಾವ ನಿಯಮ ಉಲ್ಲಂಘಿಸಿದರೆ ಎಷ್ಟು ದಂಡ?
ಚಾಲನಾ ಪರವಾನಗಿ (ಡಿಎಲ್) ಇಲ್ಲದೆ ವಾಹನ ಚಲಾಯಿಸುವವರಿಗೆ 5,000 ರೂ. ದಂಡ ವಿಧಿಸಲಾಗುವುದು. ಹಾಗೆಯೇ ರಸ್ತೆಯಲ್ಲಿ ಸಾಗುವಾಗ ಆಂಬ್ಯುಲೆನ್ಸ್‍ಗೆ ದಾರಿ ಬಿಡದ ವಾಹನ ಸವಾರರಿಗೆ 10,000 ರೂ. ದಂಡ ಹಾಕಲಾಗುತ್ತದೆ. ಅತಿ ವೇಗದ ಚಾಲನೆಗೆ 2,000 ರೂ. ದಂಡ, ಹೆಲ್ಮೆಟ್ ಹಾಕದೆ ದ್ವಿಚಕ್ರ ಚಲಾಯಿಸಿದರೆ 1,000 ರೂ. ದಂಡದ ಜೊತೆಗೆ 3 ತಿಂಗಳು ಡಿಎಲ್ ರದ್ದುಗೊಳಿಸಲಾಗುತ್ತದೆ. ಜೊತೆಗೆ ವಿಮೆ ಇಲ್ಲದೆ ವಾಹನ ಓಡಿಸಿದರೆ 2,000 ರೂ. ಹಾಗೂ ಕುಡಿದು ವಾಹನ ಚಲಾವಣೆ( ಡ್ರಿಂಕ್ ಆ್ಯಂಡ್ ಡ್ರೈವ್) ಮಾಡಿದರೆ 10,000 ರೂ. ದಂಡ ಕಟ್ಟಬೇಕು ಎಂದು ಮೋಟಾರು ವಾಹನ ತಿದ್ದುಪಡಿ ವಿಧೇಯಕ -2019ದಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago