ನವದೆಹಲಿ : ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೋಟಾರು ವಾಹನ ತಿದ್ದುಪಡಿ ವಿಧೇಯಕ 2019 ರಲ್ಲಿ ಅಪಘಾತ ಎಸಗಿದವರೇ ಸಂತ್ರಸ್ತರಿಗೆ ಪರಿಹಾರ ಕೊಡಬೇಕು ಎಂಬ ನಿಯಮದ ಬಗ್ಗೆ ಲೋಕಸಭೆಯಲ್ಲಿ ಮಂಡಿಸಿದೆ.
ರಸ್ತೆ ಅಪಘಾತ ಪ್ರಕರಣದಲ್ಲಿ ಮೃತರಿಗೆ ವಾಹನ ಮಾಲೀಕರು ಅಥವಾ ವಿಮೆದಾರರು ಗರಿಷ್ಠ 5 ಲಕ್ಷ ರೂ. ಪರಿಹಾರ ನೀಡಬೇಕು. ಒಂದು ವೇಳೆ ಗಂಭೀರವಾಗಿ ಗಾಯಗೊಂಡವರಿಗೆ ಅಪಘಾತ ಮಾಡಿದದವರೇ 2.5 ಲಕ್ಷ ರೂ. ಕನಿಷ್ಠ ಆರ್ಥಿಕ ನೆರವು ನೀಡಬೇಕು. ಹಾಗೆಯೇ ವಾಹನ ಪರವಾನಗಿ ನವೀಕರಣದ ಅವಧಿಯಲ್ಲಿ 3 ವರ್ಷದಿಂದ 5 ವರ್ಷಕ್ಕೆ ಏರಿಸಲಾಗಿದೆ. ಜೊತೆಗೆ ವಿಶೇಷ ಚೇತನರಿಗೆ ಲೈಸನ್ಸ್ ನೀಡಲು ಸಾರಿಗೆ ಇಲಾಖೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ ಎನ್ನುವ ಬಗ್ಗೆ ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.
2019 ರ ಮೋಟಾರು ವಾಹನ ತಿದ್ದುಪಡಿ ವಿಧೇಯಕದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ಭಾರಿ ದಂಡ ವಿಧಿಸಲಾಗುತ್ತದೆ. ಹಾಗೆಯೇ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಹಾಗೂ ಗಾಯಾಳುಗಳಿಗೆ ಹೆಚ್ಚಿನ ಪರಿಹಾರ ನೀಡುವುದು, ಮಾನವೀಯ ದೃಷ್ಟಿಯಲ್ಲಿ ಗಾಯಾಳುಗಳ ಸಹಾಯಕ್ಕೆ ಬರುವ ಸಾರ್ವಜನಿಕರಿಗೆ ಪೊಲೀಸ್ ವಿಚಾರಣೆಯ ಕಿರಿಕಿರಿಯಿಂದ ವಿನಾಯಿತಿ ನೀಡುವುದು, ಹೀಗೆ ಹಲವು ಸುಧಾರಣಾ ಕ್ರಮಗಳ ಬಗ್ಗೆ ತಿದ್ದುಪಡಿಯಲ್ಲಿ ಉಲ್ಲೇಖಿಸಲಾಗಿದೆ.
ಯಾವ ನಿಯಮ ಉಲ್ಲಂಘಿಸಿದರೆ ಎಷ್ಟು ದಂಡ?
ಚಾಲನಾ ಪರವಾನಗಿ (ಡಿಎಲ್) ಇಲ್ಲದೆ ವಾಹನ ಚಲಾಯಿಸುವವರಿಗೆ 5,000 ರೂ. ದಂಡ ವಿಧಿಸಲಾಗುವುದು. ಹಾಗೆಯೇ ರಸ್ತೆಯಲ್ಲಿ ಸಾಗುವಾಗ ಆಂಬ್ಯುಲೆನ್ಸ್ಗೆ ದಾರಿ ಬಿಡದ ವಾಹನ ಸವಾರರಿಗೆ 10,000 ರೂ. ದಂಡ ಹಾಕಲಾಗುತ್ತದೆ. ಅತಿ ವೇಗದ ಚಾಲನೆಗೆ 2,000 ರೂ. ದಂಡ, ಹೆಲ್ಮೆಟ್ ಹಾಕದೆ ದ್ವಿಚಕ್ರ ಚಲಾಯಿಸಿದರೆ 1,000 ರೂ. ದಂಡದ ಜೊತೆಗೆ 3 ತಿಂಗಳು ಡಿಎಲ್ ರದ್ದುಗೊಳಿಸಲಾಗುತ್ತದೆ. ಜೊತೆಗೆ ವಿಮೆ ಇಲ್ಲದೆ ವಾಹನ ಓಡಿಸಿದರೆ 2,000 ರೂ. ಹಾಗೂ ಕುಡಿದು ವಾಹನ ಚಲಾವಣೆ( ಡ್ರಿಂಕ್ ಆ್ಯಂಡ್ ಡ್ರೈವ್) ಮಾಡಿದರೆ 10,000 ರೂ. ದಂಡ ಕಟ್ಟಬೇಕು ಎಂದು ಮೋಟಾರು ವಾಹನ ತಿದ್ದುಪಡಿ ವಿಧೇಯಕ -2019ದಲ್ಲಿ ತಿಳಿಸಲಾಗಿದೆ.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…