ಹೊಸದಿಲ್ಲಿ: 2019ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಮುಸ್ಲಿಂ ಸಮುದಾಯದವರ ಅಚ್ಚುಮೆಚ್ಚಿನ ಪ್ರಧಾನಿ ಅಭ್ಯರ್ಥಿಯಾಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಷಹನವಾಜ್ ಹುಸೇನ್ ಹೇಳಿದ್ದಾರೆ.
ಮುಸ್ಲಿಂ ಸಮುದಾಯದವರಲ್ಲಿ ಅದರಲ್ಲೂ ವಿಶೇಷವಾಗಿ ಮುಸ್ಲಿಂ ಮಹಿಳೆಯರು ಪ್ರಧಾನಿ ಮೋದಿ ಅವರ ಮೇಲೆ ಇಟ್ಟಿರುವ ನಂಬಿಕೆ ಹೆಚ್ಚಿದೆ ಮತ್ತು ಹೆಚ್ಚುತ್ತಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ವಿರೋಧ ಪಕ್ಷಗಳು ಅಲ್ಪಸಂಖ್ಯಾತ ಸಮುದಾಯದಲ್ಲಿ ಮೋದಿ ಅವರ ಬಗ್ಗೆ ಭಯ ಹುಟ್ಟಿಸುವ ಕೆಲಸ ಮಾಡಿದ್ದವು. ಆದರೆ, ಈ ಭಯ ಹೋಗಲಾಡಿಸುವಲ್ಲಿ ಸಫಲರಾಗಿರುವ ಮೋದಿ ಅವರು ಮುಸ್ಲಿಂ ಸಮುದಾಯದಲ್ಲಿ ತಮ್ಮ ಬಗೆಗಿನ ನಂಬಿಕೆಯನ್ನು ಹೆಚ್ಚಿಸಿಕೊಂಡಿದ್ದಾರೆ, ಎಂದು ಹುಸೇನ್ ತಿಳಿಸಿದರು.
ದೇಶದ ಪ್ರಧಾನಿಯಾಗಿರುವ ಮೋದಿಯವರು 132 ಕೋಟಿ ಜನರನ್ನು ಭಾರತೀಯರೆಂಬ ದೃಷ್ಟಿಕೋನದಿಂದ ನೋಡುತ್ತಾರೆ. ಆದರೆ ಇತರೆ ರಾಜಕೀಯ ಪಕ್ಷಗಳು ಮುಸ್ಲಿಂ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ರೀತಿಯಲ್ಲಿ ನೋಡುತ್ತವೆ. ಈಗಾಗಲೇ ಈ ಬಗ್ಗೆ ಮುಸ್ಲಿಂ ಸಮುದಾಯ ಸೇರಿದಂತೆ ಭಾರತೀಯರಿಗೂ ಅರ್ಥವಾಗಿದೆ. ಹೀಗಾಗಿಯೇ ಪ್ರಧಾನಿ ಮೋದಿಯವರು ಎಲ್ಲರ ಅಚ್ಚು-ಮೆಚ್ಚಿನ ನಾಯಕ ಎಂದು ತಿಳಿಸಿದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ದೇಶದಲ್ಲಿ ಮುಸ್ಲಿಂ ಸಮುದಾಯ ಹಿಂದುಳಿದಿರುವುದು ಹಾಗೂ ಬಡತನದ ಸುಳಿಯಲ್ಲಿ ಸಿಲುಕಲು ಕಾಂಗ್ರೆಸ್ಸೇ ನೇರ ಕಾರಣ. ಇಂದು ಪ್ರಧಾನಿ ಮೋದಿಯವರು ಮುಸ್ಲಿಂ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಅವರು ಜಾರಿಗೆ ತಂದ ತ್ರಿವಳಿ ತಲಾಖ್ ರದ್ದು ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಭದ್ರತೆಯನ್ನು ಒದಗಿಸಿದೆ ಎಂದು ಹೇಳಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…