Featured

2019ರ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಮರ ನೆಚ್ಚಿನ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ: ಷಹನವಾಜ್‌ ಹುಸೇನ್‌

ಹೊಸದಿಲ್ಲಿ: 2019ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಮುಸ್ಲಿಂ ಸಮುದಾಯದವರ ಅಚ್ಚುಮೆಚ್ಚಿನ ಪ್ರಧಾನಿ ಅಭ್ಯರ್ಥಿಯಾಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಷಹನವಾಜ್‌ ಹುಸೇನ್‌ ಹೇಳಿದ್ದಾರೆ.

ಮುಸ್ಲಿಂ ಸಮುದಾಯದವರಲ್ಲಿ ಅದರಲ್ಲೂ ವಿಶೇಷವಾಗಿ ಮುಸ್ಲಿಂ ಮಹಿಳೆಯರು ಪ್ರಧಾನಿ ಮೋದಿ ಅವರ ಮೇಲೆ ಇಟ್ಟಿರುವ ನಂಬಿಕೆ ಹೆಚ್ಚಿದೆ ಮತ್ತು ಹೆಚ್ಚುತ್ತಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ವಿರೋಧ ಪಕ್ಷಗಳು ಅಲ್ಪಸಂಖ್ಯಾತ ಸಮುದಾಯದಲ್ಲಿ ಮೋದಿ ಅವರ ಬಗ್ಗೆ ಭಯ ಹುಟ್ಟಿಸುವ ಕೆಲಸ ಮಾಡಿದ್ದವು. ಆದರೆ, ಈ ಭಯ ಹೋಗಲಾಡಿಸುವಲ್ಲಿ ಸಫಲರಾಗಿರುವ ಮೋದಿ ಅವರು ಮುಸ್ಲಿಂ ಸಮುದಾಯದಲ್ಲಿ ತಮ್ಮ ಬಗೆಗಿನ ನಂಬಿಕೆಯನ್ನು ಹೆಚ್ಚಿಸಿಕೊಂಡಿದ್ದಾರೆ, ಎಂದು ಹುಸೇನ್ ತಿಳಿಸಿದರು.

ದೇಶದ ಪ್ರಧಾನಿಯಾಗಿರುವ ಮೋದಿಯವರು 132 ಕೋಟಿ ಜನರನ್ನು ಭಾರತೀಯರೆಂಬ ದೃಷ್ಟಿಕೋನದಿಂದ ನೋಡುತ್ತಾರೆ. ಆದರೆ ಇತರೆ ರಾಜಕೀಯ ಪಕ್ಷಗಳು ಮುಸ್ಲಿಂ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ರೀತಿಯಲ್ಲಿ ನೋಡುತ್ತವೆ. ಈಗಾಗಲೇ ಈ ಬಗ್ಗೆ ಮುಸ್ಲಿಂ ಸಮುದಾಯ ಸೇರಿದಂತೆ ಭಾರತೀಯರಿಗೂ ಅರ್ಥವಾಗಿದೆ. ಹೀಗಾಗಿಯೇ ಪ್ರಧಾನಿ ಮೋದಿಯವರು ಎಲ್ಲರ ಅಚ್ಚು-ಮೆಚ್ಚಿನ ನಾಯಕ ಎಂದು ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ದೇಶದಲ್ಲಿ ಮುಸ್ಲಿಂ ಸಮುದಾಯ ಹಿಂದುಳಿದಿರುವುದು ಹಾಗೂ ಬಡತನದ ಸುಳಿಯಲ್ಲಿ ಸಿಲುಕಲು ಕಾಂಗ್ರೆಸ್ಸೇ ನೇರ ಕಾರಣ. ಇಂದು ಪ್ರಧಾನಿ ಮೋದಿಯವರು ಮುಸ್ಲಿಂ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಅವರು ಜಾರಿಗೆ ತಂದ ತ್ರಿವಳಿ ತಲಾಖ್ ರದ್ದು ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಭದ್ರತೆಯನ್ನು ಒದಗಿಸಿದೆ ಎಂದು ಹೇಳಿದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

12 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

12 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

13 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

15 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

16 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

16 hours ago