Featured

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 300 ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ : ಪಿಯೂಶ್ ಗೋಯಲ್

ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಸ್ಥಾನಗಳನ್ನು ಗೆಲ್ಲಲ್ಲಿದ್ದು, ಎನ್‌ಡಿಎ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಪಿಯೂಶ್‌ ಗೊಯಲ್‌ ಶುಕ್ರವಾರ ಭವಿಷ್ಯ ನುಡಿದಿದ್ದಾರೆ.

ಹಿಂದೂಸ್ತಾನ್‌ ಟೈಮ್ಸ್‌ ಪತ್ರಿಕೆ ಆಯೋಜಿಸಿದ್ದ ನಾಯಕತ್ವ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಾಗತಿಕ ಆರ್ಥಿಕ ಹಿಂಜರಿತದ ನಡುವೆಯೂ ಎನ್‌ಡಿಎ ಸರ್ಕಾರ ಸಮತೋಲನ ಕಾಯ್ದುಕೊಂಡು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ಆಡಳಿತ ಮತ್ತು ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರ ಆರ್ಥಿಕ ನೀತಿಗಳ ಪರಿಣಾಮ ಭಾರತದ ಅರ್ಥ ವ್ಯವಸ್ಥೆ ಬಲಗೊಂಡಿದೆ ಎಂದು ಪಿಯೂಶ್‌ ಗೊಯಲ್‌ ತಿಳಿಸಿದರು.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಅವರ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ಆರೋಪವನ್ನು ಪಿಯೂಶ್‌ ಗೊಯಲ್ ತಳ್ಳಿಹಾಕಿದರು.

ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ, ಎರಡಂಕಿ ಇದ್ದ ಹಣದುಬ್ಬರ ಒಂದಂಕಿಗೆ ತಲುಪಿದೆ, ಬ್ಯಾಂಕಿಂಗ್ ವಲಯವನ್ನು ಬಲಪಡಿಸಲಾಗಿದೆ, ಕಳೆದ ಐದು ವರ್ಷಗಳಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಕೇವಲ ಐದು ರೂಪಾಯಿ ಮಾತ್ರ ಕುಸಿತವಾಗಿರುವುದು ಎಂದು ಚಾವ್ಲಾ ತಿಳಿಸಿದರು..

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago