Featured

2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದ್ದು ; ರಾಹುಲ್ ಗಾಂಧಿ ಮೇಲಿನ ವಿಶ್ವಾಸಾರ್ಹತೆ ಹೆಚ್ಚಾಗುತ್ತಿದೆ ,  ಹಾಗಾಗಿ ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ ಅತ್ಯುತ್ತಮ ಆಯ್ಕೆ : ವೀರಪ್ಪ ಮೊಯ್ಲಿ

2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದ್ದು ; ರಾಹುಲ್ ಗಾಂಧಿ ಮೇಲಿನ ವಿಶ್ವಾಸಾರ್ಹತೆ ಹೆಚ್ಚಾಗುತ್ತಿದೆ ,  ಹಾಗಾಗಿ ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ ಅತ್ಯುತ್ತಮ ಆಯ್ಕೆ : ವೀರಪ್ಪ ಮೊಯ್ಲಿ

ಹೈದರಾಬಾದ್: 2019ರ ಲೋಕಸಭೆ ಬಿಜೆಪಿ ವಿರೋಧಿ ಪಕ್ಷಗಳನ್ನು ಒಗ್ಗೂಡಿಸಲು ಹಲವು ಪ್ರಯತ್ನಗಳು ನಡೆಯುತ್ತಿವೆ.  ಈ ಸಂದರ್ಭದಲ್ಲಿ ಪ್ರಧಾನಿ ಹುದ್ದೆಗೆ ರಾಹುಲ್  ಗಾಂಧಿಯೇ ಪ್ರಧಾನಿಯಾಗಲು ಅತ್ಯುತ್ತಮ ಆಯ್ಕೆ ಎಂದು ಬುಧವಾರ ತೆಲಂಗಾಣದಲ್ಲಿ ಹೇಳಿದ್ದಾರೆ.

ತೆಲಂಗಾಣದಲ್ಲಿ ಪಕ್ಷದ ಪರ ಪ್ರಚಾರ ನಡೆಸಿದ ವೀರಪ್ಪ ಮೊಯ್ಲಿ, ನಮ್ಮ ಪಕ್ಷ ರಾಷ್ಟ್ರೀಯ ಮಟ್ಟದಲ್ಲಿ ಏರುಗತಿಯಲ್ಲಿದ್ರೆ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ತನ್ನ ಮಿತ್ರಪಕ್ಷಗಳನ್ನು ಕಳೆದುಕೊಳ್ಳುತ್ತಿವೆ ಎಂದು ತಿಳಿಸಿದ್ದಾರೆ.

ಬಿಜೆಪಿ ವಿರೋಧಿ ಮೈತ್ರಿಕೂಟದ ಪಕ್ಷಗಳು ರಾಹುಲ್‌ನನ್ನು ನಾಯಕನನ್ನಾಗಿ ಬಿಂಬಿಸುತ್ತವಾ ಎಂಬ ಪ್ರಶ್ನೆಗೆ  ವೀರಪ್ಪ ಮೊಯ್ಲಿ ,ರಾಹುಲ್‌ ಗಾಂಧಿಯೇ ಪ್ರಧಾನಿಯಾಗಲು ಉತ್ತಮ ಆಯ್ಕೆ ಎಂದು ವೀರಪ್ಪ ಮೊಯ್ಲಿ ಪಿಟಿಐಗೆ ತಿಳಿಸಿದ್ದಾರೆ.

”ಕಾಂಗ್ರೆಸ್ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ, ಮಿಜೋರಾಂ ಸೇರಿ ಐದೂ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ” ಎಂದೂ ಮೊಯ್ಲಿ ವಿಶ್ವಾಸದಿಂದ ಹೇಳಿದ್ದಾರೆ. ಜತೆಗೆ, ”ವಿಪಕ್ಷಗಳು ಒಗ್ಗೂಡುವುದು ವಾಸ್ತವವಾಗುತ್ತಿದ್ದು, ಕಾಂಗ್ರೆಸ್ ಎಲ್ಲ ರಾಜ್ಯಗಳಲ್ಲೂ ಮೇಲೇಳುತ್ತಿದೆ. ಹೀಗಾಗಿ, ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ನಮ್ಮ ರಾಹುಲ್ ಗಾಂಧಿ ಮೇಲಿನ ವಿಶ್ವಾಸಾರ್ಹತೆ ಹೆಚ್ಚಾಗುತ್ತಿದೆ” ಎಂದೂ ಅವರು ತಿಳಿಸಿದ್ದಾರೆ.

ನರೇಂದ್ರ ಮೋದಿ ಹಾಗೂ ಎನ್‌ಡಿಎ ವಿರುದ್ಧ ಹೋರಾಡುವ ವಿಚಾರದಲ್ಲಿ ಎಲ್ಲ ಪಕ್ಷಗಳೂ ಒಂದಾಗಿವೆ. ಅದು ಅತಿಮುಖ್ಯ” ಎಂದೂ ತೆಲಂಗಾಣದಲ್ಲಿ ಕರ್ನಾಟಕದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

13 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

13 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

14 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

14 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

14 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

14 hours ago