2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲು : ವೀರಪ್ಪ ಮೊಯ್ಲಿ ಭವಿಷ್ಯ

Featured, ಜಿಲ್ಲೆ

ಮೈಸೂರು : 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಲಿದೆ ಎಂದು ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಸಿದ್ದರಾಮಯ್ಯನವರ ಬಜೆಟ್ ನಲ್ಲಿದ್ದ ಕೆಲ ಕಾರ್ಯಕ್ರಮಗಳನ್ನು ಹೆಚ್.ಡಿ. ಕುಮಾರಸ್ವಾಮಿ ಒಪ್ಪಿದ್ದಾರೆ. ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಎದುರಿಸಬೇಕಿದೆ. ತೃತೀಯ ರಂಗ ಒಂದಾಗುತ್ತವೆ ಎನ್ನುವ ವಿಚಾರ ಇದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.

2019 ರ ರಲ್ಲಿ ಬಿಜೆಪಿ ಸೋಲುತ್ತದೆ. ಕೆಲ ರಾಜ್ಯಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಬೇರೆ ಪಕ್ಷಗಳ ಜೊತೆ ಹೊಂದಾಣಿಕೆ ಕಷ್ಟ. ಆದರೆ ದೇಶದ ರಾಜಕೀಯ ಚುನಾವಣೆಯ ವಿಚಾರದಲ್ಲಿ ಒಂದಾಗುವ ಸಾಧ್ಯತೆಯಿದೆ. ಬಿಜೆಪಿಯವರಿಗೆ ತಮ್ಮ ಸೋಲಿನ ಅರಿವು ತಿಳಿದಿದೆ. ಅದರಿಂದಲೇ ಅವರು ಕೆಲ ಹೇಳಿಕೆಗಳನ್ನು ನೀಡುತ್ತಿದ್ದಾರೆ ಅಂತಾ ಆರೋಪಿಸಿದ್ದಾರೆ.