2020 ಜನವರಿ 30 ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲದಲ್ಲಿ ಬ್ರಹ್ಮಕಲಶೋತ್ಸವ -Vishwanews24
ಬಜಪೆ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಸನ್ನಿಧಿಯಲ್ಲಿ2020ರ ಜ.30ಕ್ಕೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ನಂತರದಲ್ಲಿನಡೆಯುವ ನಾಗಮಂಡಲೋತ್ಸವ, ಸಹಸ್ರ ಚಂಡಿಕಾಯಾಗಗಳಿಗೆ ಸಂಬಂಧಿಸಿ ವಿಜ್ಞಾಪನಾ ಪತ್ರ ಹಾಗೂ ಪ್ರಚಾರ ಸಾಮಗ್ರಿಗಳನ್ನು ಸಂಸದ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಭಾನುವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು ಸಂಭ್ರಮ ಮಾದರಿಯೂ ಸ್ಮರಣೀಯವೂ ಆಗಿರುವಂತೆ ಪರಿಸರ ಸ್ನೇಹೀ ಬಟ್ಟೆಯ ಬ್ಯಾನರ್ಗಳನ್ನು ಬಳಸಲಾಗುತ್ತಿದೆ ಎಂದರು.
ದೇವಳದ ಅನುವಂಶಿಕ ಮೊಕ್ತೇಸರ ಹಾಗೂ ಆಡಳಿತ ಸಮಿತಿಯ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು, ಅನುವಂಶಿಕ ಮೊಕ್ತೇಸರ ಹಾಗೂ ಆಚಾರ್ಯ ಕೆ ವಾಸುದೇವ ಅಸ್ರಣ್ಣ, ಅರ್ಚಕರಾದ ಅನಂತ ಪದ್ಮನಾಭ ಅಸ್ರಣ್ಣ, ಶ್ರೀಹರಿ ನಾರಾಯಣ ದಾಸ ಅಸ್ರಣ್ಣ, ಸುಧೀರ್ ಶೆಟ್ಟಿ ಕೊಡೆತ್ತೂರು ಗುತ್ತು, ಬಿಪಿನ್ ಚಂದ್ರ ಶೆಟ್ಟಿ, ಹೈಕೋರ್ಟ್ನ ಹಿರಿಯ ನ್ಯಾಯವಾದಿ ಪಿ.ಎಸ್. ರಾಜಗೋಪಾಲ್, ಡಾ. ಸೋಂದಾ ಭಾಸ್ಕರ ಭಟ್, ಮುರಾ ಸದಾಶಿವ ಶೆಟ್ಟಿ, ಭಾಸ್ಕರ ದೇವಸ್ಯ, ಈಶ್ವರ ಕಟೀಲು, ಆದಶ್ರ್ ಶೆಟ್ಟಿ, ಜಿತೇಂದ್ರ ಶೆಟ್ಟಿ, ಪ್ರದ್ಯಮ್ನ ರಾವ್, ಗುರುರಾಜ್ ಮತ್ತಿತರರು ಉಪಸ್ಥಿತರಿದ್ದರು.
