Featured

2021ರಿಂದ ಈ ಸ್ಮಾರ್ಟ್ ಫೋನ್ ಗಳಲ್ಲಿ ವಾಟ್ಸಾಪ್ ಬಂದ್…!!  -Vishwanews24

2021ರಿಂದ ಈ ಸ್ಮಾರ್ಟ್ ಫೋನ್ ಗಳಲ್ಲಿ ವಾಟ್ಸಾಪ್ ಬಂದ್  -Vishwanews24

ವಾಟ್ಸಾಪ್ 2021ರಿಂದ ಕೆಲವು ಆಯಂಡ್ರಾಯ್ಡ್ ಮತ್ತು ಐಫೋನ್ ಗಳಲ್ಲಿ ತನ್ನ ಕಾರ್ಯನಿರ್ವಹಣೆ  ಸ್ಥಗಿತ ..

ನವದೆಹಲಿ: ವಾಟ್ಸಾಪ್ 2021ರಿಂದ ಕೆಲವು ಆಯಂಡ್ರಾಯ್ಡ್ ಮತ್ತು ಐಪೋನ್ ಗಳಲ್ಲಿ ತನ್ನ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಲಿದೆ.

ಐಓಎಸ್ 9 ಮತ್ತು ಆಯಂಡ್ರಾಯ್ಡ್ 4.0.3 ಅಪರೇಟಿಂಗ್ ಸಿಸ್ಟಂ ಹೊಂದಿರುವ ಹಳೆಯ ಡಿವೈಸ್ ಗಳಲ್ಲಿ ವಾಟ್ಸಾಪ್ ತನ್ನ ಕಾರ್ಯವನ್ನು ಮುಂದಿನ ವರ್ಷದಿಂದ (2021) ಸಂಪೂರ್ಣ ನಿಲ್ಲಿಸಲಿದೆ.

ಪ್ರಮುಖವಾಗಿ ಐಪೋನ್-4 ಮತ್ತು ಅದಕ್ಕೂ ಮೊದಲಿನ ಸ್ಮಾರ್ಟ್ ಫೋನ್, ಐಫೋನ್ 4ಎಸ್, ಐಫೋನ್ 5, ಐಫೋನ್ 5ಸಿ, ಐಪೋನ್ 5ಎಸ್, ಐಫೊನ್ 6, ಐಪೋನ್ 6ಎಸ್ ಮುಂತಾದವುಗಳಲ್ಲಿ ವಾಟ್ಸಾಪ್ ನಿಷ್ಕ್ರೀಯಗೊಳ್ಳಲಿದೆ.

ಆಯಂಡ್ರಾಯ್ಡ್ ನಲ್ಲೂ ಕೂಡ 4.0.3 ಆಪರೇಟಿಂಗ್ ಸಿಸ್ಟಂ ಹೊಂದಿರುವ ಡಿವೈಸ್ ಗಳಲ್ಲಿ 2021ರಿಂದ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ. ಪ್ರಮುಖವಾಗಿ ಹೆಚ್ ಟಿಸಿ ಡಿಸೈರ್, ಎಲ್ ಜಿ ಆಪ್ಟಿಮಸ್ ಬ್ಲ್ಯಾಕ್, ಮೋಟೋರೋವಾಲ ಡ್ರಾಯ್ಡ್ ರೇಜರ್, ಸ್ಯಾಮ್ ಸಂಗ್ ಗ್ಯಾಲಕ್ಷಿ ಎಸ್2, ಸೇರಿದಂತೆ ಇತರ ಹಳೆಯ ಸ್ಮಾರ್ಟ್ ಫೋನ್ ಗಳಲ್ಲಿ ವಾಟ್ಸಾಪ್ ತನ್ನ ಚಟುವಟಿಕೆಯನ್ನು ನಿಲ್ಲಿಸಲಿದೆ.

ಹೊಸ ಸ್ಮಾರ್ಟ್ ಪೋನ್ ಅಥವಾ ಅಪ್ ಡೇಟೆಡ್ ಸಾಫ್ಟ್ ವೇರ್ ಗಳನ್ನು ಹೊಂದಿರುವ ಡಿವೈಸ್ ಗಳಲ್ಲಿ ವಾಟ್ಸಾಪ್ ಎಂದಿನಂತೆ ಕಾರ್ಯನಿರ್ವಹಿಸಲಿದೆ.

ಇತ್ತೀಚಿಗಷ್ಟೇ ವಾಟ್ಸಾಪ್ ಬಳಕೆದಾರರ ಹಿತದೃಷ್ಟಿಯಿಂದ ಪೇಮೆಂಟ್ ಸರ್ವಿಸ್, ಕಸ್ಟಂ ವಾಲ್ ಪೇಪರ್ಸ್, ಕಸ್ಟಂ ಕಾರ್ಟ್ಸ್, ಆಲ್ವೇಸ್ ಮ್ಯೂಟ್ ಸೇರಿದಂತೆ ಹಲವು ಫೀಚರ್ ಗಳನ್ನು ಜಾರಿಗೆ ತಂದಿತ್ತು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago