Featured

2021ರಿಂದ ಈ ಸ್ಮಾರ್ಟ್ ಫೋನ್ ಗಳಲ್ಲಿ ವಾಟ್ಸಾಪ್ ಬಂದ್…!!  -Vishwanews24

2021ರಿಂದ ಈ ಸ್ಮಾರ್ಟ್ ಫೋನ್ ಗಳಲ್ಲಿ ವಾಟ್ಸಾಪ್ ಬಂದ್  -Vishwanews24

ವಾಟ್ಸಾಪ್ 2021ರಿಂದ ಕೆಲವು ಆಯಂಡ್ರಾಯ್ಡ್ ಮತ್ತು ಐಫೋನ್ ಗಳಲ್ಲಿ ತನ್ನ ಕಾರ್ಯನಿರ್ವಹಣೆ  ಸ್ಥಗಿತ ..

ನವದೆಹಲಿ: ವಾಟ್ಸಾಪ್ 2021ರಿಂದ ಕೆಲವು ಆಯಂಡ್ರಾಯ್ಡ್ ಮತ್ತು ಐಪೋನ್ ಗಳಲ್ಲಿ ತನ್ನ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಲಿದೆ.

ಐಓಎಸ್ 9 ಮತ್ತು ಆಯಂಡ್ರಾಯ್ಡ್ 4.0.3 ಅಪರೇಟಿಂಗ್ ಸಿಸ್ಟಂ ಹೊಂದಿರುವ ಹಳೆಯ ಡಿವೈಸ್ ಗಳಲ್ಲಿ ವಾಟ್ಸಾಪ್ ತನ್ನ ಕಾರ್ಯವನ್ನು ಮುಂದಿನ ವರ್ಷದಿಂದ (2021) ಸಂಪೂರ್ಣ ನಿಲ್ಲಿಸಲಿದೆ.

ಪ್ರಮುಖವಾಗಿ ಐಪೋನ್-4 ಮತ್ತು ಅದಕ್ಕೂ ಮೊದಲಿನ ಸ್ಮಾರ್ಟ್ ಫೋನ್, ಐಫೋನ್ 4ಎಸ್, ಐಫೋನ್ 5, ಐಫೋನ್ 5ಸಿ, ಐಪೋನ್ 5ಎಸ್, ಐಫೊನ್ 6, ಐಪೋನ್ 6ಎಸ್ ಮುಂತಾದವುಗಳಲ್ಲಿ ವಾಟ್ಸಾಪ್ ನಿಷ್ಕ್ರೀಯಗೊಳ್ಳಲಿದೆ.

ಆಯಂಡ್ರಾಯ್ಡ್ ನಲ್ಲೂ ಕೂಡ 4.0.3 ಆಪರೇಟಿಂಗ್ ಸಿಸ್ಟಂ ಹೊಂದಿರುವ ಡಿವೈಸ್ ಗಳಲ್ಲಿ 2021ರಿಂದ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ. ಪ್ರಮುಖವಾಗಿ ಹೆಚ್ ಟಿಸಿ ಡಿಸೈರ್, ಎಲ್ ಜಿ ಆಪ್ಟಿಮಸ್ ಬ್ಲ್ಯಾಕ್, ಮೋಟೋರೋವಾಲ ಡ್ರಾಯ್ಡ್ ರೇಜರ್, ಸ್ಯಾಮ್ ಸಂಗ್ ಗ್ಯಾಲಕ್ಷಿ ಎಸ್2, ಸೇರಿದಂತೆ ಇತರ ಹಳೆಯ ಸ್ಮಾರ್ಟ್ ಫೋನ್ ಗಳಲ್ಲಿ ವಾಟ್ಸಾಪ್ ತನ್ನ ಚಟುವಟಿಕೆಯನ್ನು ನಿಲ್ಲಿಸಲಿದೆ.

ಹೊಸ ಸ್ಮಾರ್ಟ್ ಪೋನ್ ಅಥವಾ ಅಪ್ ಡೇಟೆಡ್ ಸಾಫ್ಟ್ ವೇರ್ ಗಳನ್ನು ಹೊಂದಿರುವ ಡಿವೈಸ್ ಗಳಲ್ಲಿ ವಾಟ್ಸಾಪ್ ಎಂದಿನಂತೆ ಕಾರ್ಯನಿರ್ವಹಿಸಲಿದೆ.

ಇತ್ತೀಚಿಗಷ್ಟೇ ವಾಟ್ಸಾಪ್ ಬಳಕೆದಾರರ ಹಿತದೃಷ್ಟಿಯಿಂದ ಪೇಮೆಂಟ್ ಸರ್ವಿಸ್, ಕಸ್ಟಂ ವಾಲ್ ಪೇಪರ್ಸ್, ಕಸ್ಟಂ ಕಾರ್ಟ್ಸ್, ಆಲ್ವೇಸ್ ಮ್ಯೂಟ್ ಸೇರಿದಂತೆ ಹಲವು ಫೀಚರ್ ಗಳನ್ನು ಜಾರಿಗೆ ತಂದಿತ್ತು.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

13 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

14 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

14 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

15 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

16 hours ago