Featured

2021ರಿಂದ ಈ ಸ್ಮಾರ್ಟ್ ಫೋನ್ ಗಳಲ್ಲಿ ವಾಟ್ಸಾಪ್ ಬಂದ್…!!  -Vishwanews24

2021ರಿಂದ ಈ ಸ್ಮಾರ್ಟ್ ಫೋನ್ ಗಳಲ್ಲಿ ವಾಟ್ಸಾಪ್ ಬಂದ್  -Vishwanews24

ವಾಟ್ಸಾಪ್ 2021ರಿಂದ ಕೆಲವು ಆಯಂಡ್ರಾಯ್ಡ್ ಮತ್ತು ಐಫೋನ್ ಗಳಲ್ಲಿ ತನ್ನ ಕಾರ್ಯನಿರ್ವಹಣೆ  ಸ್ಥಗಿತ ..

ನವದೆಹಲಿ: ವಾಟ್ಸಾಪ್ 2021ರಿಂದ ಕೆಲವು ಆಯಂಡ್ರಾಯ್ಡ್ ಮತ್ತು ಐಪೋನ್ ಗಳಲ್ಲಿ ತನ್ನ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಲಿದೆ.

ಐಓಎಸ್ 9 ಮತ್ತು ಆಯಂಡ್ರಾಯ್ಡ್ 4.0.3 ಅಪರೇಟಿಂಗ್ ಸಿಸ್ಟಂ ಹೊಂದಿರುವ ಹಳೆಯ ಡಿವೈಸ್ ಗಳಲ್ಲಿ ವಾಟ್ಸಾಪ್ ತನ್ನ ಕಾರ್ಯವನ್ನು ಮುಂದಿನ ವರ್ಷದಿಂದ (2021) ಸಂಪೂರ್ಣ ನಿಲ್ಲಿಸಲಿದೆ.

ಪ್ರಮುಖವಾಗಿ ಐಪೋನ್-4 ಮತ್ತು ಅದಕ್ಕೂ ಮೊದಲಿನ ಸ್ಮಾರ್ಟ್ ಫೋನ್, ಐಫೋನ್ 4ಎಸ್, ಐಫೋನ್ 5, ಐಫೋನ್ 5ಸಿ, ಐಪೋನ್ 5ಎಸ್, ಐಫೊನ್ 6, ಐಪೋನ್ 6ಎಸ್ ಮುಂತಾದವುಗಳಲ್ಲಿ ವಾಟ್ಸಾಪ್ ನಿಷ್ಕ್ರೀಯಗೊಳ್ಳಲಿದೆ.

ಆಯಂಡ್ರಾಯ್ಡ್ ನಲ್ಲೂ ಕೂಡ 4.0.3 ಆಪರೇಟಿಂಗ್ ಸಿಸ್ಟಂ ಹೊಂದಿರುವ ಡಿವೈಸ್ ಗಳಲ್ಲಿ 2021ರಿಂದ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ. ಪ್ರಮುಖವಾಗಿ ಹೆಚ್ ಟಿಸಿ ಡಿಸೈರ್, ಎಲ್ ಜಿ ಆಪ್ಟಿಮಸ್ ಬ್ಲ್ಯಾಕ್, ಮೋಟೋರೋವಾಲ ಡ್ರಾಯ್ಡ್ ರೇಜರ್, ಸ್ಯಾಮ್ ಸಂಗ್ ಗ್ಯಾಲಕ್ಷಿ ಎಸ್2, ಸೇರಿದಂತೆ ಇತರ ಹಳೆಯ ಸ್ಮಾರ್ಟ್ ಫೋನ್ ಗಳಲ್ಲಿ ವಾಟ್ಸಾಪ್ ತನ್ನ ಚಟುವಟಿಕೆಯನ್ನು ನಿಲ್ಲಿಸಲಿದೆ.

ಹೊಸ ಸ್ಮಾರ್ಟ್ ಪೋನ್ ಅಥವಾ ಅಪ್ ಡೇಟೆಡ್ ಸಾಫ್ಟ್ ವೇರ್ ಗಳನ್ನು ಹೊಂದಿರುವ ಡಿವೈಸ್ ಗಳಲ್ಲಿ ವಾಟ್ಸಾಪ್ ಎಂದಿನಂತೆ ಕಾರ್ಯನಿರ್ವಹಿಸಲಿದೆ.

ಇತ್ತೀಚಿಗಷ್ಟೇ ವಾಟ್ಸಾಪ್ ಬಳಕೆದಾರರ ಹಿತದೃಷ್ಟಿಯಿಂದ ಪೇಮೆಂಟ್ ಸರ್ವಿಸ್, ಕಸ್ಟಂ ವಾಲ್ ಪೇಪರ್ಸ್, ಕಸ್ಟಂ ಕಾರ್ಟ್ಸ್, ಆಲ್ವೇಸ್ ಮ್ಯೂಟ್ ಸೇರಿದಂತೆ ಹಲವು ಫೀಚರ್ ಗಳನ್ನು ಜಾರಿಗೆ ತಂದಿತ್ತು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

20 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

20 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

20 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

23 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

23 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

24 hours ago