Featured

2021 ರಲ್ಲಿ ಭಾರತದಲ್ಲಿ ಯಾವುದೇ ಗ್ರಹಣ ಗೋಚರವಾಗುವುದಿಲ್ಲ : ಡಾ.ಎ.ಪಿ.ಭಟ್ -Vishwanews24

2021 ರಲ್ಲಿ ಭಾರತದಲ್ಲಿ ಯಾವುದೇ ಗ್ರಹಣ ಗೋಚರವಾಗುವುದಿಲ್ಲ -Vishwanews24

ಉಡುಪಿ: 2021ರಲ್ಲಿ ನಾಲ್ಕು ಗ್ರಹಣಗಳು ಸಂಭವಿಸಲಿದ್ದು, ಮೇ 26ಕ್ಕೆ ಖಗ್ರಾಸ ಚಂದ್ರಗ್ರಹಣ, ನ 19ಕ್ಕೆ ಪಾರ್ಶ್ವ ಚಂದ್ರಗ್ರಹಣ, ಜೂನ್ 10ಕ್ಕೆ ಕಂಕಣ ಸೂರ್ಯ ಗ್ರಹಣ, ಡಿ 4ಕ್ಕೆ ಖಗ್ರಾಸ ಸೂರ್ಯ ಗ್ರಹಣಗಳು ಸಂಭವಿಸುತ್ತವೆ. ಆದರೆ, ಭಾರತದಲ್ಲಿರುವವರಿಗೆ ಈ ಗ್ರಹಣಗಳು ಗೋಚರಿಸುವುದಿಲ್ಲ ಎಂದು ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎ.ಪಿ.ಭಟ್ ತಿಳಿಸಿದ್ದಾರೆ.

2021ರ ಮತ್ತೊಂದು ವಿಶೇಷ ಎಂದರೆ ನಾಲ್ಕು ಸೂಪರ್ ಮೂನ್‌ಗಳು ಕಾಣಲಿದ್ದು, ಮಾರ್ಚ್ 28, ಏ.27, ಮೇ 26, ಜೂನ್ 24 ರಂದು ಗೋಚರಿಸಲಿವೆ. ಸೂಪರ್ ಮೂನ್‌ಗಳು ಹುಣ್ಣಿಮೆಯಲ್ಲಿ ಕಾಣಿಸಲಿದ್ದು, ಅಂದು ಚಂದ್ರ ಸುಮಾರು 25 ಅಂಶ ದೊಡ್ಡದಾಗಿ ಕಾಣಲಿದ್ದಾನೆ ಎಂದು ತಿಳಿಸಿದ್ದಾರೆ.

ಪ್ರತಿ ವರ್ಷ ಸಂಭವಿಸುವ 15 ಉಲ್ಕಾಪಾತಗಳಲ್ಲಿ ಈ ವರ್ಷ ಕೆಲವು ಪ್ರಮುಖವಾಗಿದ್ದು, ಜ.4 ರ ಕ್ವಾಡ್ರಂಟಿಡ್ ಉಲ್ಕಾಪಾತ, ಆ.12ರ ಪರ್ಸಿಡ್ ಉಲ್ಕಾಪಾತ ಹಾಗೂ ಡಿ.14ರ ಜಿಮಿನಿಡ್ ಉಲ್ಕಾಪಾತಗಳನ್ನು ಕಣ್ತುಂಬಿಕೊಳ್ಳಬಹುದು.

ಗುರು ಹಾಗೂ ಶನಿ ಗ್ರಹಗಳು ವರ್ಷಕ್ಕೊಮ್ಮೆ ಚೆಂದವಾಗಿ ದೊಡ್ಡದಾಗಿ ಕಾಣಲಿವೆ. ಆ.2 ರಂದು ಶನಿಗ್ರಹ ಹಾಗೂ ಆ.20ರಂದು ಗುರುಗ್ರಹ ರಾತ್ರಿಯಿಡೀ ಗೋಚರಿಲಿವೆ. ಕಾಣಲಿವೆ. ಏ.27ರಂದು ಮಂಗಳನನ್ನು ಚಂದ್ರ ಅಡ್ಡವಾಗಿ ಮರೆಮಾಚುವ ಕೌತುಕ ನಡೆಯಲಿದೆ.

ಫೆಬ್ರವರಿ ಮೊದಲ ವಾರದವರೆಗೆ ಬೆಳಗಿನ ಜಾವ ಕಾಣುವ ಶುಕ್ರ ಗ್ರಹ, ಏ.21ರಿಂದ ಇಡೀ ವರ್ಷ ಪಶ್ಚಿಮ ಆಕಾಶದಲ್ಲಿ ಸಂಜೆ ಗೋಚರಿಸಲಿದೆ. 584 ದಿನಗಳಿಗೊಮ್ಮೆ ಸಂಜೆಯ ಆಕಾಶದಲ್ಲಿ ದೊಡ್ಡದಾಗಿ ಕಾಣುವ ಶುಕ್ರ ಗ್ರಹ, ಅ.29ರಂದು 47 ಡಿಗ್ರಿ ಎತ್ತರದಲ್ಲಿ ಪಶ್ಚಿಮ ಆಕಾಶದಲ್ಲಿ ಕಾಣಲಿದೆ.

ವರ್ಷದಲ್ಲಿ ಹೆಚ್ಚೆಂದರೆ ಆರು ಬಾರಿ ಕಾಣುವ ಬುಧ ಗ್ರಹ ಜ.24, ಮೇ 17, ಸೆ.14 ಸಂಜೆಯ ಸೂರ್ಯಾಸ್ತದ ಕೆಲ ನಿಮಿಷಗಳಲ್ಲಿ ಪಶ್ಚಿಮ ಆಕಾಶದಲ್ಲಿ ಕಂಡರೆ, ಮಾರ್ಚ್ 6, ಜುಲೈ 4 ಹಾಗೂ ಅ.25ರಲ್ಲಿ ಬೆಳಗಿನ ಜಾವ ಪೂರ್ವ ಆಕಾಶದಲ್ಲಿ ಕಾಣಲು ಸಿಗುತ್ತದೆ.

ಸೂರ್ಯನ ಸುತ್ತ ಧೀರ್ಘ ವೃತ್ತಾಕಾರದಲ್ಲಿ ಸುತ್ತುವ ಭೂಮಿಯು ಜ.2ರಂದು ಸಮೀಪದಲ್ಲಿದ್ದರೆ, ಜುಲೈ 6ರಂದು ದೂರದಲ್ಲಿ ಇರುತ್ತದೆ ಎಂದು ಡಾ.ಎ.ಪಿ.ಭಟ್ ತಿಳಿಸಿದ್ದಾರೆ

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

4 minutes ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

5 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

5 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

6 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

6 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

6 hours ago