Featured

2021 ರಲ್ಲಿ ಭಾರತದಲ್ಲಿ ಯಾವುದೇ ಗ್ರಹಣ ಗೋಚರವಾಗುವುದಿಲ್ಲ : ಡಾ.ಎ.ಪಿ.ಭಟ್ -Vishwanews24

2021 ರಲ್ಲಿ ಭಾರತದಲ್ಲಿ ಯಾವುದೇ ಗ್ರಹಣ ಗೋಚರವಾಗುವುದಿಲ್ಲ -Vishwanews24

ಉಡುಪಿ: 2021ರಲ್ಲಿ ನಾಲ್ಕು ಗ್ರಹಣಗಳು ಸಂಭವಿಸಲಿದ್ದು, ಮೇ 26ಕ್ಕೆ ಖಗ್ರಾಸ ಚಂದ್ರಗ್ರಹಣ, ನ 19ಕ್ಕೆ ಪಾರ್ಶ್ವ ಚಂದ್ರಗ್ರಹಣ, ಜೂನ್ 10ಕ್ಕೆ ಕಂಕಣ ಸೂರ್ಯ ಗ್ರಹಣ, ಡಿ 4ಕ್ಕೆ ಖಗ್ರಾಸ ಸೂರ್ಯ ಗ್ರಹಣಗಳು ಸಂಭವಿಸುತ್ತವೆ. ಆದರೆ, ಭಾರತದಲ್ಲಿರುವವರಿಗೆ ಈ ಗ್ರಹಣಗಳು ಗೋಚರಿಸುವುದಿಲ್ಲ ಎಂದು ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎ.ಪಿ.ಭಟ್ ತಿಳಿಸಿದ್ದಾರೆ.

2021ರ ಮತ್ತೊಂದು ವಿಶೇಷ ಎಂದರೆ ನಾಲ್ಕು ಸೂಪರ್ ಮೂನ್‌ಗಳು ಕಾಣಲಿದ್ದು, ಮಾರ್ಚ್ 28, ಏ.27, ಮೇ 26, ಜೂನ್ 24 ರಂದು ಗೋಚರಿಸಲಿವೆ. ಸೂಪರ್ ಮೂನ್‌ಗಳು ಹುಣ್ಣಿಮೆಯಲ್ಲಿ ಕಾಣಿಸಲಿದ್ದು, ಅಂದು ಚಂದ್ರ ಸುಮಾರು 25 ಅಂಶ ದೊಡ್ಡದಾಗಿ ಕಾಣಲಿದ್ದಾನೆ ಎಂದು ತಿಳಿಸಿದ್ದಾರೆ.

ಪ್ರತಿ ವರ್ಷ ಸಂಭವಿಸುವ 15 ಉಲ್ಕಾಪಾತಗಳಲ್ಲಿ ಈ ವರ್ಷ ಕೆಲವು ಪ್ರಮುಖವಾಗಿದ್ದು, ಜ.4 ರ ಕ್ವಾಡ್ರಂಟಿಡ್ ಉಲ್ಕಾಪಾತ, ಆ.12ರ ಪರ್ಸಿಡ್ ಉಲ್ಕಾಪಾತ ಹಾಗೂ ಡಿ.14ರ ಜಿಮಿನಿಡ್ ಉಲ್ಕಾಪಾತಗಳನ್ನು ಕಣ್ತುಂಬಿಕೊಳ್ಳಬಹುದು.

ಗುರು ಹಾಗೂ ಶನಿ ಗ್ರಹಗಳು ವರ್ಷಕ್ಕೊಮ್ಮೆ ಚೆಂದವಾಗಿ ದೊಡ್ಡದಾಗಿ ಕಾಣಲಿವೆ. ಆ.2 ರಂದು ಶನಿಗ್ರಹ ಹಾಗೂ ಆ.20ರಂದು ಗುರುಗ್ರಹ ರಾತ್ರಿಯಿಡೀ ಗೋಚರಿಲಿವೆ. ಕಾಣಲಿವೆ. ಏ.27ರಂದು ಮಂಗಳನನ್ನು ಚಂದ್ರ ಅಡ್ಡವಾಗಿ ಮರೆಮಾಚುವ ಕೌತುಕ ನಡೆಯಲಿದೆ.

ಫೆಬ್ರವರಿ ಮೊದಲ ವಾರದವರೆಗೆ ಬೆಳಗಿನ ಜಾವ ಕಾಣುವ ಶುಕ್ರ ಗ್ರಹ, ಏ.21ರಿಂದ ಇಡೀ ವರ್ಷ ಪಶ್ಚಿಮ ಆಕಾಶದಲ್ಲಿ ಸಂಜೆ ಗೋಚರಿಸಲಿದೆ. 584 ದಿನಗಳಿಗೊಮ್ಮೆ ಸಂಜೆಯ ಆಕಾಶದಲ್ಲಿ ದೊಡ್ಡದಾಗಿ ಕಾಣುವ ಶುಕ್ರ ಗ್ರಹ, ಅ.29ರಂದು 47 ಡಿಗ್ರಿ ಎತ್ತರದಲ್ಲಿ ಪಶ್ಚಿಮ ಆಕಾಶದಲ್ಲಿ ಕಾಣಲಿದೆ.

ವರ್ಷದಲ್ಲಿ ಹೆಚ್ಚೆಂದರೆ ಆರು ಬಾರಿ ಕಾಣುವ ಬುಧ ಗ್ರಹ ಜ.24, ಮೇ 17, ಸೆ.14 ಸಂಜೆಯ ಸೂರ್ಯಾಸ್ತದ ಕೆಲ ನಿಮಿಷಗಳಲ್ಲಿ ಪಶ್ಚಿಮ ಆಕಾಶದಲ್ಲಿ ಕಂಡರೆ, ಮಾರ್ಚ್ 6, ಜುಲೈ 4 ಹಾಗೂ ಅ.25ರಲ್ಲಿ ಬೆಳಗಿನ ಜಾವ ಪೂರ್ವ ಆಕಾಶದಲ್ಲಿ ಕಾಣಲು ಸಿಗುತ್ತದೆ.

ಸೂರ್ಯನ ಸುತ್ತ ಧೀರ್ಘ ವೃತ್ತಾಕಾರದಲ್ಲಿ ಸುತ್ತುವ ಭೂಮಿಯು ಜ.2ರಂದು ಸಮೀಪದಲ್ಲಿದ್ದರೆ, ಜುಲೈ 6ರಂದು ದೂರದಲ್ಲಿ ಇರುತ್ತದೆ ಎಂದು ಡಾ.ಎ.ಪಿ.ಭಟ್ ತಿಳಿಸಿದ್ದಾರೆ

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

2 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

2 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

2 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

2 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

2 days ago