ಬೆಂಗಳೂರು: 2023ಕ್ಕೆ ಈ ಮಂಗಳಮುಖಿ ಸರ್ಕಾರ ತೆಗೆಯಬೇಕಿದೆ. ಏಕೆಂದರೆ ಗಂಡಸೂ ಅಲ್ಲ, ಹೆಂಗಸೂ ಅಲ್ಲದ ಸರ್ಕಾರ ಇದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಟೀಕಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಸರ್ಕಾರವನ್ನು ತರುವುದು ನಮ್ಮ ಗುರಿಯಾಗಿದೆ. ಆದಷ್ಟು ಬೇಗ ಮಂಗಳಮುಖಿಯರ ಸರ್ಕಾರ ತೆಗೆಯಬೇಕು. ಈ ಸರ್ಕಾರದ ಜೊತೆಗೆ ಹೋರಾಡಲು ಆಗಲ್ಲ, ಸುಮ್ಮನಿರಲು ಆಗಲ್ಲ ಎಂದು ವ್ಯಂಗ್ಯವಾಡಿದರು.
ಈ ಸರ್ಕಾರವು ಹೆಂಗಸರಾದರೆ ಹೆಂಗಸರನ್ನು ಕಳಿಸಬಹುದು. ಗಂಡಸರಾದರೆ ಗಂಡಸರನ್ನು ಕಳಿಸಬಹುದು. ಆದರೆ ಇವರು ಎರಡೂ ಅಲ್ಲ, ಭಾಷಾ ಅಂತ ಚಪ್ಪಾಳೆ ತಟ್ಟಿಬಿಡ್ತಾರೆ. ಏನಾದರೂ ಆರೋಪ ಮಾಡಿದರೆ ಕಿಸಿಕ್ ಅಂತ ನಗುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ವಿಧಾನ ಪರಿಷ್ ಸ್ಥಾನಕ್ಕೆ ಟಿಕೆಟ್ ಸಿಗದಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಟಿಕೆಟ್ ಆಕಾಂಕ್ಷಿ ಆಗಿರಲಿಲ್ಲ. ನಾನು ಪಕ್ಷದ ಅಧ್ಯಕ್ಷನಾಗಿ ಉದಾತ್ತ ಮನೋಭಾವ ತೋರಿಸಬೇಕು. ಬಡಿಸೋ ಜಾಗದಲ್ಲಿ ಇದ್ದು ನಾವೇ ಊಟ ಮಾಡೋಕೆ ಕೂತರೆ ಹೆಂಗೆ ಎಂದು ಪ್ರಶ್ನಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…